ಕುಮಟಾದಲ್ಲಿ ಸಿಎಂಗೆ ಸ್ವಾಗತ ಕೋರಿದ ಬಿಜೆಪಿ ಕಾರ್ಯಕರ್ತರು

ಕುಮಟಾ: ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಮತ್ತು ಬಿಜೆಪಿ ಮಂಡಳದ ವತಿಯಿಂದ ಕುಮಟಾ ಪಟ್ಟಣದಲ್ಲಿ ಸನ್ಮಾನಿಸಿ, ಗೌರವಿಸಿದರು.

ಭಟ್ಕಳದ ನೆರಹಾವಳಿಯಿ ಹಾನಿಯನ್ನು ಪರಿಶೀಲಿಸಲು ಗೋವಾದಿಂದ ಭಟ್ಕಳಕ್ಕೆ ತೆರಳುತ್ತಿರುವಾಗ ಪಟ್ಟಣದ ಬಿಜೆಪಿ ಕಾರ್ಯಾಲಯದ ಎದುರು ಆತ್ಮೀಯವಾಗಿ ಬರ ಮಾಡಿಕೊಂಡು ಗೌರವಿಸಿದರು.

ಈ ವೇಳೆ ಬಿಜೆಪಿ ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವಕರ, ಜಿ.ಪಂ ಮಾಜಿ ಸದಸ್ಯ ಗಜಾನನ ಪೈ, ಹಿರಿಯ ಮುಖಂಡ ವಿನೋದ ಪ್ರಭು, ಮಾಜಿ ಮಂಡಲಾಧ್ಯಕ್ಷ ಕುಮಾರ ಮಾರ್ಕಾಂಡೆ, ಪುರಸಭಾ ಅಧ್ಯಕ್ಷೆ ಮೋಹಿನಿ ಗೌಡ, ಉಪಾಧ್ಯಕ್ಷೆ ಸುಮತಿ ಭಟ್ಟ, ಹೊಲನಗದ್ದೆ ಗ್ರಾ.ಪಂ ಸದಸ್ಯೆ ಅನುರಾಧಾ ಭಟ್ಟ, ಯುವ ಮೋರ್ಚಾ ಜಿಲ್ಲಾ ಪ್ರಭಾರಿ ಪ್ರೋ.ಎಂ.ಜಿ.ಭಟ್ಟ, ಜಿಲ್ಲಾ ಯುವ ಮೋರ್ಚಾ ಸದಸ್ಯರಾಧ ಆದಿತ್ಯ ಶೇಟ್, ಕಾರ್ತಿಕ ಭಟ್ಟ ಕತಗಾಲ, ಪ್ರಮುಖರಾದ ಚೇತೇಶ ಶಾನಭಾಗ, ಹರೀಶ ನಾಯ್ಕ, ರಾಮು ಕೆಂಚನ್, ಪುರಸಭಾ ಸದಸ್ಯರಾದ ಮೋಹನಿ ಗೌಡ, ಶೈಲಾ ಗೌಡ, ಸುಶೀಲಾ ನಾಯ್ಕ ಸೇರಿದಂತೆ ಮತ್ತಿತರರು ಇದ್ದರು.