ಭಟ್ಕಳದ ಶಿರಾಲಿ ವೆಂಕಟಾಪುರ ರಾ.ಹೆದ್ದಾರಿಯಲ್ಲಿ ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ

ಭಟ್ಕಳ ತಾಲೂಕಿನ ಶಿರಾಲಿ ವೆಂಕಟಾಪುರ ರಾ.ಹೆದ್ದಾರಿಯಲ್ಲಿ ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ರೆ ಓರ್ವ ಯುವತಿ ಸಾವನ್ನಪ್ಪಿದ ಘಟನೆ ನಡೆದಿದೆ…

ಮೃತ ಯುವತಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದ ಕಾರ್ಗಿಲ್ ನಿವಾಸಿ ನಿಕಿತಾ ಮಹಾಬಲೇಶ್ವರ ಗೊಂಡ (23) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು45 ವರ್ಷದ ಗಿರಿಜಾ ಗೊಂಡ ಮತ್ತು 35 ವರ್ಷದ ಗಣೇಶ ಗೊಂಡ ಎಂದು ಗುರುತಿಸಲಾಗಿದೆ. ಮೃತ ನಿಕಿತಾ ಇತ್ತೀಚೆಗಷ್ಟೇ ಪದವಿ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಭಟ್ಕಳದಲ್ಲಿರುವ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದರು. ಮೂವರು ಬೈಕ್ನಲ್ಲಿ ಶಿರಾಲಿಗೆ ತೆರಳುತ್ತಿದ್ದಾಗ ವೇಗವಾಗಿ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ಪರಿಣಾಮ ಮಧ್ಯದಲ್ಲಿ ಕುಳಿತಿದ್ದ ನಿಕಿತಾ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಗಿರಿಜಾ ಗೊಂಡ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದ್ದು. ಹೆಲ್ಮೆಟ್ ಧರಿಸಿದ್ದ ಗಣೇಶ ಗೊಂಡ ಕೈಗಳಿಗೆ ಸಣ್ಣಪುಟ್ಟ ಗಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಲಾರಿ ಚಾಲಕ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪಿಎಸ್ಐ ಮಯೂರ್ ಪಟ್ಟಣ ಶೆಟ್ಟಿ ಹಾಗೂ ಅವರ ತಂಡಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..