ಮೆಣಸಿನಕಾಯಿ ಕಳ್ಳತನ: ಕಂಬಕ್ಕೆ ಕಟ್ಟಿ ಹಾಕಿ ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಥಳಿತ

ಗದಗ, ನವೆಂಬರ್​​ 26: ಮೆಣಸಿನಕಾಯಿ ಕದ್ದ ಇಬ್ಬರು ಕಳ್ಳರನ್ನು ದೇವಸ್ಥಾನದ ಕಂಬಕ್ಕೆ ಕಟ್ಟಿ ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಥಳಿಸಿರುವಂತಹ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯತ್ತಿನಹಳ್ಳಿ ಗ್ರಾಮದ ಶಿವು ಮತ್ತು ಮಂಜುನಾಥ್​ ನನ್ನು ಹಿಗ್ಗಾಮುಗ್ಗಾ ಥಳಿಸಿದ್ದು, ಕಳ್ಳರಿಗೆ ಮೆಣಸಿನಕಾಯಿ ಮೂಟೆ ಹೊರಿಸಿ ಗ್ರಾಮಸ್ಥರಿಂದ ಮೆರವಣಿಗೆ ಮಾಡಿದ್ದಾರೆ. ಕಳ್ಳನ ಹೆಗಲ ಮೇಲೆ ಇನ್ನೊಬ್ಬ ಕಳ್ಳನನ್ನ ಕೂರಿಸಿ ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಮೆಣಸಿನಕಾಯಿಗೆ ಬಂಪರ್ ಬೆಲೆ ಬಂದ ಹಿನ್ನೆಲೆಯಲ್ಲಿ ಕಳ್ಳತನ ಮಾಡಿದ್ದಾರೆ