ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತಿಗೆ ಚುನಾವಣೆ ಆಯೋಗ ತಡೆ: ಸಿದ್ದರಾಮಯ್ಯ ಹೇಳಿದ್ದಿಷ್ಟು

ಬೆಂಗಳೂರು, (ನವೆಂಬರ್ 28): ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತಿಗೆ ಕೇಂದ್ರ ಚುನಾವಣೆ ಆಯೋಗ ತಡೆ ನೀಡಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕದಲ್ಲಿ ಮಾಡಿರುವ ಸಾಧನೆಯನ್ನು ನಾವು ಅಲ್ಲಿ ಹಾಕಿದ್ದೇವೆ. ತೆಲಂಗಾಣ ಮತದಾರರ ಮೇಲೆ ಪ್ರಭಾವ ಬೀರಲು ನಾವು ಮಾಡಿಲ್ಲ. ಚುನಾವಣಾ ಆಯೋಗ ಸೂಚನೆ ಬಳಿಕ ಜಾಹೀರಾತು ತೆರವುಗೊಳಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಇದೇ ವೇಳೆ ನಿಗಮ ಮಂಡಳಿ ನೇಮಕ ವಿಚಾರಕ್ಕೆ ನನ್ನನ್ನು ಪರಿಗಣಿಸಿಲ್ಲ ಎಂಬ ಪರಮೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಪರಮೇಶ್ವರ್ ಅಷ್ಟೇ ಅಲ್ಲ, ಯಾರ ಅಭಿಪ್ರಾಯವನ್ನೂ ನಾವು ಪಡೆದಿಲ್ಲ. ನಿಗಮ ಮಂಡಳಿ ನೇಮಕ ಪಟ್ಟಿ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಫೈನಲ್ ಆಗಿಲ್ಲ, ಯಾರ ಅಭಿಪ್ರಾಯವನ್ನು ನಾವು ಪಡೆದಿಲ್ಲ. ಈಗ ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ಹೇಳಿದರು.

ಇನ್ನು ಇದೇ ವೇಳೆ ನಿಗಮ ಮಂಡಳಿ ನೇಮಕ ವಿಚಾರಕ್ಕೆ ನನ್ನನ್ನು ಪರಿಗಣಿಸಿಲ್ಲ ಎಂಬ ಪರಮೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಪರಮೇಶ್ವರ್ ಅಷ್ಟೇ ಅಲ್ಲ, ಯಾರ ಅಭಿಪ್ರಾಯವನ್ನೂ ನಾವು ಪಡೆದಿಲ್ಲ. ನಿಗಮ ಮಂಡಳಿ ನೇಮಕ ಪಟ್ಟಿ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಫೈನಲ್ ಆಗಿಲ್ಲ, ಯಾರ ಅಭಿಪ್ರಾಯವನ್ನು ನಾವು ಪಡೆದಿಲ್ಲ. ಈಗ ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ಹೇಳಿದರು.