ಬಿಜೆಪಿ ಕಾರ್ಯಕರ್ತರ ರಾಜಿನಾಮೆಗೆ ಅಮಿತ್ ಶಾ ಫುಲ್ ಗರಂ.!

ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಸಚಿವ ಅಮಿತ್ ಶಾ ರಾಜ್ಯ ಬಿಜೆಪಿ ಮುಖಂಡರ ಮೇಲೆ ಗರಂ ಆಗಿದ್ದಾರೆ ಎನ್ನಲಾಗಿದೆ. ಪ್ರವೀಣ್ ಹತ್ಯೆ ಬಳಿಕ ಯುವಮೋರ್ಚಾ ಪದಾಧಿಕಾರಿಗಳು ರಾಜ್ಯವ್ಯಾಪಿ ಸಾಮೂಹಿಕ ರಾಜಿನಾಮೆ ನೀಡಿ ಬಿಜೆಪಿ ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ನಡೆಯುತ್ತಿರುವ ಈ ಎಲ್ಲಾ ಬೆಳವಣಿಗೆಗಳನ್ನ ಸೂಕ್ಷ್ಮವಾಗಿ ಗಮನಿಸಿರುವ ಅಮಿತ್ ಶಾ ರಾಜ್ಯ ಭೇಟಿ ಬೆನ್ನಲ್ಲೇ ಬಿಜೆಪಿ ಮುಖಂಡರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ರಾಜ್ಯದಲ್ಲಿ ಏನಾಗ್ತಾ ಇದೆ.? ನಮ್ಮದು ಕಾರ್ಯಕರ್ತರ ಪಕ್ಷ. ಕಾರ್ಯಕರ್ತರೇ ಈ ರಿತಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿರುವಾಗ ನೀವೆಲ್ಲಾ ಏನು ಮಾಡುತ್ತಿದ್ದೀರಿ.? ಎಂದು ಮುಖಂಡರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಕಾರ್ಯಕರ್ತರನ್ನು ಸಮಾಧಾನಪಡಿಸುವಂತೆ ಸೂಚನೆ ಕೂಡಾ ನೀಡಿದ್ದಾರೆ. ಈ ರೀತಿಯಾದ್ರೆ ಪಕ್ಷಕ್ಕೆ ಹಿನ್ನೆಡೆಯಾಗುತ್ತದೆ. ಜಾಗ್ರತೆಯಿಂದ ಕೆಲಸ ಮಾಡಿ ಎಂದು ಅಮಿತ್ ಶಾ ಗರಂ ಆಗಿದ್ದಾರೆ.