ವಕೀಲರ ದಿನಾಚರಣೆಯಲ್ಲಿ ‌ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ರಾಮಚಂದ್ರ ಹುದ್ದಾರ್ ಹಾಗೂ ನ್ಯಾಯವಾದಿ ಜಿ.ವಿ ಭಟ್ಟರಿಗೆ ಸನ್ಮಾನ


ಹೊನ್ನಾವರ :
ಡಿಸೆಂಬರ್ 3ರಂದು ಹೊನ್ನಾವರ ನ್ಯಾಯಾಲಯದ ಆವರಣದಲ್ಲಿ ವಕೀಲರ ದಿನಾಚರಣೆ ನಿಮಿತ್ತ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಹೊನ್ನಾವರದಲ್ಲಿ ನ್ಯಾಯಾಧೀಶರಾಗಿ ಅಮೂಲ್ಯ ಸೇವೆ ಸಲ್ಲಿಸಿ, ಇದೀಗ ಕರ್ನಾಟಕ ಹೈಕೋರ್ಟಿನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿ ರಾಮಚಂದ್ರ ಡಿ ಹುದ್ದಾರ್ ಅವರನ್ನು ವಕೀಲರ ದಿನಾಚರಣೆ ಮುಖ್ಯ ಅತಿಥಿಗಳಾಗಿ ಆಹ್ವಾನಿಸಿ ಸನ್ಮಾನಿಸಿ ಅಭಿನಂದಿಸಲು ತೀರ್ಮಾನಿಸಲಾಗಿದೆ. ಅವರ ಜೊತೆ ಮುಖ್ಯ ಅತಿಥಿಗಳಾಗಿ ಎರಡನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ. ಎಲ್. ಮಾಯಣ್ಣ ಆಗಮಿಸಲಿದ್ದಾರೆ.

ಈ ಸಮಾರಂಭದಲ್ಲಿ ಹೊನ್ನಾವರ ವಕೀಲರ ಸಂಘದಿಂದ ಹಿರಿಯ ನ್ಯಾಯವಾದಿ, ಪ್ರಸ್ತುತ ವಕೀಲರ ಸಂಘದ ಅಧ್ಯಕ್ಷ ಜಿ.ವಿ.ಭಟ್ಟರನ್ನು ಅವರ ವೃತ್ತಿ ಜೀವನದಲ್ಲಿ ನ್ಯಾಯವಾದಿಗಳಾಗಿ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿರುವ ನ್ಯಾ.ಮೂ. ಹುದ್ದಾರ್ ಹಾಗೂ ಅತಿಥಿಗಳಾಗಿ ಭಾಗವಹಿಸಿಲಿರುವ ಹೊನ್ನಾವರದ ಹಿರಿಯ ದಿವಾಣಿ ನ್ಯಾಯಾಲಯದ ನ್ಯಾಯಮೂರ್ತಿ ಕುಮಾರ್ ಜಿ, ಪ್ರಧಾನ ದಿವಾಣಿ ನ್ಯಾಯಾಲಯದ ನ್ಯಾಯಮೂರ್ತಿ ಚಂದ್ರಶೇಖರ್ ಬಣಕಾರ್, ಹೆಚ್ಚುವರಿ ದಿವಾಣಿ ನ್ಯಾಯಾಲಯದ ನ್ಯಾಯಮೂರ್ತಿ ಈರಣ್ಣ ಹುಣಶೀಕಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಸನ್ಮಾನಿಸಲಾಗುವುದು.

ಸನ್ಮಾನದ ನಂತರ ವಕೀಲರಿಂದ ವಿಚಾರ ವಿನಿಮಯ ನಡೆಯಲಿದ್ದು, ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಕೀಲರ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಮನೋಜ್ ಎಂ. ಜಾಲಿಸತ್ಗಿ ಹಾಗೂ ಸಂಘದ ಸರ್ವ ಸದಸ್ಯರು ತಿಳಿಸಿದ್ದಾರೆ…