ಸಾಲ ಬಾದೆಯನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಭಟ್ಕಳ: ಸಾಲ ಬಾದೆಯನ್ನು ಮನಸ್ಸಿಗೆ ಹಚ್ಚಿಕೊಂಡ ವ್ಯಕ್ತಿ ಯೋರ್ವ ತಾಲೂಕಿನ ಕಡವಿನಕಟ್ಟಾ ಡ್ಯಾಮ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿ ವಾಸು ನಾಯ್ಕ ಮೂಡಶಿರಾಲಿ ನಿವಾಸಿ ಎಂದು ತಿಳಿದು ಬಂದಿದೆ. ಈತ ಜಾಲಿ ಗ್ರಾಮೀಣ ವಿಕಾಸ ಬ್ಯಾಂಕಿನಲ್ಲಿ ಪಿಗ್ನಿ ಎಜೆಂಟ ಆಗಿ ಕೆಲಸ ಮಾಡಿಕೊಂಡಿದ್ದವನು. ಅದೇ ಬ್ಯಾಂಕಿನಲ್ಲಿ ಸುಮಾರು 3 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು.. ಸಾಲ ತೀರಿಸಲು ಬೇಜಾರು ಮಾಡಿಕೊಂಡು ಮನಸ್ಸಿಗೆ ಹಚ್ಚಿಕೊಂಡಿದ್ದವನು. ಬೆಳ್ಳಿಗ್ಗೆ ಯಾರಿಗೂ ಹೇಳದೆ ಮನೆಯಿಂದ ಹೋದವರು ಭಟ್ಕಳ ತಾಲೂಕಿನ ಕಡವಿನಕಟ್ಟಾ ಡ್ಯಾಮಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ