ಸರಸ್ವತಿ ಪಿಯು ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ – ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಹಿರಿಯ ವಿಶ್ವಸ್ಥ ರಮೇಶ ಪ್ರಭು ಅವರಿಂದ ಉದ್ಘಾಟನೆ

ಕುಮಟಾದಲ್ಲಿ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಬಿ. ಕೆ. ಭಂಡಾರಕರ್ಸ್‌ ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಡಿಸೆಂಬರ್ 1 ಮತ್ತು 2 ರಂದು ಸಂಸ್ಥೆಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಕೊಂಕಣ ಎಜ್ಯುಕೇಶನ್ ಟ್ರಸ್ಟ್‌ನ ಹಿರಿಯ ವಿಶ್ವಸ್ಥ ರಮೇಶ ಪ್ರಭು ಕಾರ್ಯಕ್ರಮ ಉದ್ಘಾಟಿಸಿದ್ರು…

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅತ್ಯವಶ್ಯಕವಾಗಿದೆ, ಇತ್ತೀಚಿನ ದಿನಗಳಲ್ಲಿ ಪಠ್ಯಕ್ರಮಕ್ಕೆ ನೀಡುವ ಮಹತ್ವ ಪಠ್ಯೇತರ ಚಟುವಟಿಕೆಗಳಿಗೆ ನೀಡುತ್ತಿಲ್ಲದಿರುವುದು ವಿಷಾದದ ಸಂಗತಿಯಾಗಿದೆ. ಆದ್ರೆ ಸರಸ್ವತಿ ಪಿಯು ಕಾಲೇಜಿನವರು ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ರಮೇಶ ಪ್ರಭು ಹೇಳಿದ್ರು.

ಅಥ್ಲೆಟಿಕ್ಸ್ ,ವಾಲಿಬಾಲ್ ಥ್ರೋಬಾಲ, ಬ್ಯಾಡ್ಮಿಂಟನ್, ಚೆಸ್, ಕೆರಮ್ ಮುಂತಾದ ಕ್ರೀಡಾಸ್ಪರ್ಧೆಯಲ್ಲಿ ಕಾಲೇಜಿನ‌ ವಿದ್ಯಾರ್ಥಿಗಳು ಬಹಳ ಹುಮ್ಮಸ್ಸಿನಿಂದ ಭಾಗವಹಿಸಿದರು. ಈ ಸಂದರ್ಭದಲ್ಲಿ ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಚಾರ್ಯ ಕಿರಣ ಭಟ್ಟ, ಉಪಪ್ರಾಂಶುಪಾಲೆ ಸುಜಾತಾ ಹೆಗಡೆ, ಕ್ರೀಡಾ ಸಂಯೋಜಕ ಪದ್ಮನಾಭ ಪ್ರಭು ಹಾಗೂ ಉಪನ್ಯಾಸಕ ವೃಂದದವರು ನಿರ್ಣಾಯಕರಾದ ದಿವಾಕರ, ಸುಮಂಗಲಾ, ಜಯರಾಜ ನಾಗಾರಾಜ, ಮೊದಲಾದವರು ಉಪಸ್ಥಿತರಿದ್ದರು…