ಮೋಹರಂ ಸಮಿತಿಯ ಪದಾಧಿಕಾರಿಗಳೊಂದಿಗೆ ಪೊಲೀಸ್ ಅಧಿಕಾರಿಗಳ ಸಭೆ

ಯಲ್ಲಾಪುರ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ತಾಲೂಕಿನ 23 ಮೋಹರಂ ಸಮಿತಿಯ ಪದಾಧಿಕಾರಿಗಳೊಂದಿಗೆ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದರು.

ಸಿಪಿಐ ಸುರೇಶ ಯಳ್ಳೂರು ಮಾತನಾಡಿ, ಮೊಹರಂ ಆಚರಣೆಯಿಂದ ಸಂಚಾರಕ್ಕೆ ಅಡಚಣೆ ಉಂಟಾಗಬಾರದು. ಅನ್ಯ ಧರ್ಮದವರ ಮನೋಭಾವಕ್ಕೆ ಧಕ್ಕೆ ಮಾಡಬಾರದು. ಊಹಾಪೋಹ, ವದಂತಿಗಳಿಗೆ ಕಿವಿ ಗೊಡಬಾರದು. ಅಲ್ಲದೇ ಸಣ್ಣಪುಟ್ಟ ಸಮಸ್ಯೆಗಳನ್ನು ದೊಡ್ಡದಾಗಿ ಮಾಡಬಾರದು. ಪೊಲೀಸರು ನೀಡುವ ಸಲಹೆ ಸೂಚನೆ ಪಾಲಿಸಿ ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದರು.

ಸಭೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು, ಮೊಹರಂ ಸಮಿತಿಗಳ ಪ್ರಮುಖರು ಭಾಗಿಯಾಗಿದ್ದರು.