ಇಂದಿರಾ ಕ್ಯಾಂಟಿನ್‌ನಲ್ಲಿ ಉಪಹಾರ ಸೇವಿಸಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ: ಗಾಂಧಿ ನಗರದಲ್ಲಿರುವ ಇಂದಿರಾ ಕ್ಯಾಂಟಿನ್‌ಗೆ ಶನಿವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಬೆಳಗಿನ ಉಪಹಾರವಾಗಿ ಮಸಾಲಾ ರೈಸ್ ಸವಿದರು.

ಕ್ಯಾಂಟಿನ್‌ನಲ್ಲಿ ಶುಚಿ ಮತ್ತು ರುಚಿಗೆ ಹೆಚ್ಚಿನ ಆದ್ಯತೆ ನೀಡುವಂತೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿ, ಕ್ಯಾಂಟಿನ್ ಉಪಯೋಗಕ್ಕೆ ನೀಡಿರುವ ಫ್ರಿಡ್ಜ್ ಮತ್ತಿತರ ಯಂತ್ರೋಪಕರಣಗಳನ್ನು ವ್ಯವಸ್ಥಿತವಾಗಿ ಬಳಸುವಂತೆ ಹಾಗೂ ಶುದ್ದ ಕುಡಿಯುವ ನೀರನ್ನು ಗ್ರಾಹಕರಿಗೆ ಒದಗಿಸುವಂತೆ ಸೂಚನೆ ನೀಡಿದರು.

ಪ್ರತಿ ದಿನದ ಮೆನುವಿನ ಪ್ರಕಾರವೇ ಕ್ಯಾಂಟಿನ್‌ನಲ್ಲಿ ಆಹಾರ ತಯಾರಿಸಿ, ಗ್ರಾಹಕರಿಗೆ ವಿತರಿಸಬೇಕು. ಮೆನುವಿನಲ್ಲಿ ಬದಲಾವಣೆ ಮಾಡಬಾರದು ಎಂದು ಸಿಬ್ಬಂದಿಗಳಿಗೆ ತಿಳಿಸಿದರು

ಈ ವೇಳೆ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗೀಸ್, ನಗರಸಭೆ ಪೌರಾಯುಕ್ತ ಕೆ.ಚಂದ್ರಮೌಳಿ ಇದ್ದರು.