ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿ ಕೊಳ್ಳುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ದೈಹಿಕ ಸಾಮರ್ಥ್ಯ ಹೆಚ್ಚುತ್ತದೆ-ಶಾಸಕ ಭೀಮಣ್ಣ ನಾಯ್ಕ್

ಸಿದ್ದಾಪುರ : ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿ ಕೊಳ್ಳುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ದೈಹಿಕ ಸಾಮರ್ಥ್ಯ ಹೆಚ್ಚುತ್ತದೆ ಇದರಿಂದ ದಿನನಿತ್ಯದ ಕೆಲಸ ಕಾರ್ಯದಲ್ಲಿ ಉತ್ಸಾಹದಿಂದ ತೊಡಗಿ ಕೊಳ್ಳಲು ಸಾಧ್ಯ ಎಂದು ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ್ ಹೇಳಿದರು. ಅವರು ಕಡಕೇರಿ ಕಾನಳ್ಳಿಯ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ತಾಲೂಕ ಪತ್ರಕರ್ತ ಸಂಘದವರು ಆಯೋಜಿಸಿದ ನಾಲ್ಕನೇ ವರ್ಷದ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ದಿನನಿತ್ಯ ಕೆಲಸದ ಒತ್ತಡದ ನಡುವೆಯೂ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದೀರಿ ಇಂದು ಬಿಡುವು ಮಾಡಿಕೊಂಡು ಪಾಲ್ಗೊಂಡಿದ್ದೀರಿ ಎಲ್ಲರಿಗೂ ಶುಭವಾಗಲಿ ಎಂದು ಎಲ್ಲರಿಗೂ ಶುಭ ಹಾರೈಸಿದರು. ತಹಸೀಲ್ದಾರ್ ಎಂ.ಆರ್ ಕುಲಕರ್ಣಿ, ಬೇಡ್ಕಣಿ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಮೂರ್ತಿ ಮಡಿವಾಳ ಕಡಿಕೇರಿ ಮಾತನಾಡಿದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಐ ನಾಯ್ಕ್, ಇ. ಒ ದೇವರಾಜ್ ಹಿತ್ಲಕೊಪ್ಪ ಹೆ ಸ್ಕಾಂ ಇ ಓ ನಾಗರಾಜ್ ಪಾಟೀಲ್, ದೈಹಿಕ ಪರಿಕ್ಷಕ ಎಂ ವಿ ನಾಯ್ಕ್, ತಾಲೂಕ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್ ಹೆಗಡೆ, ಪ್ರಮುಖರಾದ ಪಾಂಡುರಂಗ ನಾಯ್ಕ್, ಬಾಲಕೃಷ್ಣ ನಾಯ್ಕ್ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಯಶವಂತ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ರಮೇಶ್ ಹಾರ್ಸಿ ಮನೆ ಸ್ವಾಗತಿಸಿ ನಿರೂಪಿಸಿದರು, ಪತ್ರಕರ್ತ ನಾಗರಾಜ್ ಮಾಳ್ಕೋಡ್ ವಂದಿಸಿದರು. ಎಲ್ಲ ಪತ್ರಕರ್ತರು ಹಾಜರಿದ್ದರು.