ಮಹಿಳೆಯರಿಗೆ ರಕ್ಷಾಬಂಧನಕ್ಕೆ ಬಂಪರ್ ಗಿಫ್ಟ್ ನೀಡಿದ ಯೋಗಿ.!

ಉತ್ತರ ಪ್ರದೇಶ: ಸಿಎಂ ಯೋಗಿ ಆದಿತ್ಯನಾಥ್ ರಕ್ಷಾಬಂಧನ ಹಿನ್ನೆಲೆ ಬಂಪರ್ ಉಡುಗೊರೆ ನೀಡಿದ್ದಾರೆ.
ಆಗಸ್ಟ್ 10 ರ ಮಧ್ಯರಾತ್ರಿಯಿಂದ ಆಗಸ್ಟ್ 12 ರ ಮಧ್ಯರಾತ್ರಿಯವರೆಗೆ ಮಹಿಳೆಯರು 48 ಗಂಟೆಗಳ ಕಾಲ ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣಿಸಬಹುದು ಎಂದು ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ಈ ಕುರಿತು ಉತ್ತರ ಪ್ರದೇಶ ಸಿಎಂ ಕಚೇರಿ, ರಕ್ಷಾಬಂಧನ ಸಂದರ್ಭದಲ್ಲಿ ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲಾ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕು ಎಂದು ಟ್ವೀಟ್ ಮೂಲಕ ತಿಳಿಸಿದೆ. ಈ ಪ್ರಕಾರ ಉತ್ತರ ಪ್ರದೇಶ ರಾಜ್ಯಸಾರಿಗೆ ಬಸ್‌ಗಳಲ್ಲಿ 48 ಗಂಟೆಗಳ ಕಾಲ ಮಹಿಳೆಯರು ಉಚಿತ ಪ್ರಯಾಣವನ್ನು ಮಾಡಬಹುದಾಗಿದೆ.