ಸಿದ್ದಾಪುರದ ಹೆರೂರಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ


ಸಿದ್ದಾಪುರದ ಅಣಲೇಬೈಲ್‌ ಪಂಚಾಯತಿಯ ಹೆರೂರಿನಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಯ ಬಗ್ಗೆ ಪಂಚಾಯತ್‌ ಮಟ್ಟದಲ್ಲಿ ಮಾಹಿತಿ ನೀಡುವ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು…

ಅಣಲೇಬೈಲ್‌ ಗ್ರಾ. ಪಂ ಉಪಾಧ್ಯಕ್ಷೆ ಸುಮಾ ಶ್ಯಾಮಸುಂದರ ಮಾತನಾಡಿ, ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಬಗ್ಗೆ ಪಂಚಾಯತ್‌ ಸಿಬ್ಬಂದಿಗಳಿಗೆ ಹಾಗೂ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ರು.. ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಬಗ್ಗೆ ಸಿದ್ದಾಪುರ ವಿಜಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ಶಿವಶಂಕರ ಎನ್ ಕೆ. ಸಂಪೂರ್ಣ ಮಾಹಿತಿ ನೀಡಿದ್ರು…

ಈ ವೇಳೆ ನೋಡಲ್ ಅಧಿಕಾರಿ ಹಾಗೂ ಹೆರೂರು ಬ್ಯಾಂಕ್ ಆಫ್ ಬರೋಡಾ ಶಾಖೆಯ ವ್ಯವಸ್ಥಾಪಕ ಪ್ರವೀಣ ಭಟ್ ಪ್ರತಿಜ್ಞಾವಿಧಿ ಬೋಧಿಸಿದ್ರು. ಈ ವೇಳೆ ಪಂ. ಸದಸ್ಯ ರಾಜೀವ ವೆಂಕಟ್ರಮಣ ಭಾಗವತ, ಸದಸ್ಯೆ ಪ್ರೇಮಾ ಚೆನ್ನಯ್ಯ, ಸಿಬ್ಬಂದಿ ದಾಕ್ಷಾಯಿಣಿ, ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗಣಪತಿ ಹೆಗಡೆ ಹಾಗೂ ಇತರರು ಉಪಸ್ಥಿತರಿದ್ರು…