ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ದಾಂಡೇಲಿಗೆ ಭೇಟಿ

ದಾಂಡೇಲಿ : ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ರಾತ್ರಿ ದಾಂಡೇಲಿ ನಗರಕ್ಕೆ ಭೇಟಿ ನೀಡಲಿದ್ದಾರೆ.

ಬೆಳಗಾವಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ರಾತ್ರಿ ಹತ್ತು ಗಂಟೆಗೆ ದಾಂಡೇಲಿಗೆ ಆಗಮಿಸಲಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನಗರದ ಜಂಗಲ್ ಲಾಡ್ಜಸ್ ನಲ್ಲಿ ವಾಸ್ತವ್ಯವನ್ನು ಹೂಡಲಿದ್ದಾರೆ. ಬುಧವಾರ ಬೆಳಗ್ಗೆ ದಾಂಡೇಲಿ ಯಿಂದ ಕಾರವಾರಕ್ಕೆ ಪ್ರಯಾಣವನ್ನು ಬೆಳೆಸಲಿದ್ದಾರೆ ಎಂಬ ಮಾಹಿತಿ ಮಾಧ್ಯಮಕ್ಕೆ ಲಭ್ಯವಾಗಿದೆ.