ಕೃಷ್ಣ ಜನ್ಮಭೂಮಿ ವಿವಾದ: ಶಾಹಿ ಈದ್ಗಾ ಮಸೀದಿ ಸಂಕೀರ್ಣದ ಸರ್ವೇಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ

ದೆಹಲಿ. ಡಿ.15: ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ, ಶಾಹಿ-ಈದ್ಗಾ ಮಸೀದಿಯ ಸರ್ವೇ ನಡೆಸಲು ಅಲಹಾಬಾದ್ ಹೈಕೋರ್ಟ್ ನ್ಯಾಯಾಲಯದ ಆಯುಕ್ತರ ನೇಮಕಕ್ಕೆ ಆದೇಶ ನೀಡಿತ್ತು. ಇದಕ್ಕೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್​ಗೆ ಮನವಿಯನ್ನು ಮಾಡಲಾಗಿತ್ತು. ಆದರೆ ಇದೀಗ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.