‘ಪ್ರವಾಹದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಪರಿಹಾರ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ’ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರ: ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಇದ್ರಿಂದ ರಾಜ್ಯದಲ್ಲಿ ಕೋಮು ಸಂಘರ್ಷ ಬಿತ್ತುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತ ವಿಭಜನೆ ಮಾಡುವುದು ಬಿಜೆಪಿಯ ಗುರಿ. ರೈತರು, ಬಡವರು, ದೀನದಲಿತರ ಸಮಸ್ಯೆಗಳಿಗೆ ಉತ್ತರ ಕೊಡಲು ಆಗಿಲ್ಲ. ರಾಜ್ಯದಲ್ಲಿ ಪ್ರವಾಹ ಬಂದಿದೆ. ಜನ ಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ ಆಗಿಲ್ಲ. ಇದ್ರಿಂದ ದೇವರು ಧರ್ಮ ಜಾತಿ ಅಂತ ಹೇಳಿಕೊಂಡು ಬಿಜೆಪಿ ನಾಯಕರು ತಿರುಗಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.