ಜೋಯಿಡಾ ತಾಲ್ಲೂಕಿನ ಪ್ರಧಾನಿ – ಜನತಾ ಕಾಲೋನಿ ರಸ್ತೆಯಲ್ಲಿ ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ

ಜೋಯಿಡಾ : ಶ್ರೀ ಕ್ಷೇತ್ರ ಉಳವಿ ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಜೋಯಿಡಾ ತಾಲ್ಲೂಕಿನ ಪ್ರಧಾನಿ – ಜನತಾ ಕಾಲೋನಿ ರಸ್ತೆಯಲ್ಲಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದ 41 ವರ್ಷ ವಯಸ್ಸಿನ ಸಿದ್ದನಗೌಡ ದೊಡ್ಡ ಗೌಡ ಪಾಟೀಲ್ ಎಂಬವರೇ ಗಂಭೀರ ಗಾಯಗೊಂಡು ಧಾರವಾಡದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಅತಿಯಾದ ವೇಗ ಹಾಗೂ ಚಾಲಕನ ನಿರ್ಲಕ್ಷವೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಈ ಬಗ್ಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೂರು ಸ್ವೀಕರಿಸಿಕೊಂಡ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.