ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಸಾವು

ಮಂಗಳೂರು: ಕೊಣಾಜೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜಗನ್ನಾಥ್.ಪಿ (44) ಮೃತ ದುರ್ದೈವಿ. ಅಸ್ಪಸ್ಧರಾದ ಜಗನ್ನಾಥ್ ರನ್ನು ಕಣಚೂರು ಆಸ್ಫತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಪುತ್ತೂರು ತಾಲೂಕಿನ ಸವಣೂರು ಗ್ರಾಮದ ಜಗನ್ನಾಥ್ ಸಾವನ್ನಪ್ಪಿದ್ದಾರೆ. ಕೊಣಾಜೆ ಠಾಣೆಯಲ್ಲಿ ಹಲವು ತಿಂಗಳಿನಿಂದ ಎಸ್ ಬಿಯಾಗಿ ಜಗನ್ನಾಥ್ ಕಾರ್ಯನಿರ್ವಹಿಸುತ್ತಿದ್ದರು.