ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಪೂರ್ವಭಾವಿ ಸಭೆ

ಮುಂಡಗೋಡ: ಸ್ವಾತಂತ್ರೋತ್ಸವ ನಿಮಿತ್ತ ತಹಶೀಲ್ದಾರ ಶಂಕರ ಗೌಡ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ 75 ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆಯ ಕುರಿತು ಚರ್ಚಿಸಲಾಯಿತು.

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆ ಎಲ್ಲರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಅದರಂತೆ ನಾವೆಲ್ಲರು ನಮ್ಮ ನಮ್ಮ ಮನೆಗಳಲ್ಲಿ ಧ್ವಜಾರೋಹನವನ್ನು ಮಾಡೋಣ ಎಂದು ಹೇಳಿದರು.

ಅದಲ್ಲದೇ ಧ್ವಜವನ್ನು ಸರಿಯಾಗಿ ಹಾರಿಸಲು ಪಟ್ಟಣ ವ್ಯಾಪ್ತಿಯಲ್ಲಿ ಮುಖ್ಯಾಧಿಕಾರಿ ಹಾಗೂ ಗ್ರಾಮೀಣ ಭಾಗದಲ್ಲಿ ಪಿಡಿಒಗಳು ಸಾರ್ವಜನಿಕರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.

ಈ ವೇಳೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರೇಣುಕಾ ರವಿ ಹಾವೇರಿ, ತಾ.ಪಂ ಅಧಿಕಾರಿ ಪ್ರವೀಣ ಕಟ್ಟಿ, ಸಿಪಿಐ ಸಿದ್ದಪ್ಪ ಸಿಮಾನಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.