ದಾಂಡೇಲಿಯಲ್ಲಿ ಹನುಮ ಮಾಲಾಧಾರಿಗಳಿಂದ ಸಂಭ್ರಮದಿಂದ ನಡೆದ ಹನುಮನ‌ ಮೂರ್ತಿಯ ಶೋಭಾಯಾತ್ರೆ

ದಾಂಡೇಲಿ : ನಗರದ ಸುಭಾಷ್ ನಗರದಲ್ಲಿರುವ ಶ್ರೀ.ಪ್ರಸನ್ನ ಆಂಜನೇಯ ದೇವಸ್ಥಾನದ ಹನುಮ ಮಾಲಾಧಾರಿಗಳಿಂದ ಬುಧವಾರ ಶ್ರೀ.ಹನುಮನ ಮೂರ್ತಿಯ ಶೋಭಾಯಾತ್ರೆಯನ್ನು ಸಂಭ್ರಮದಿಂದ ಹಮ್ಮಿಕೊಳ್ಳಲಾಯ್ತು.

ಸುಭಾಷ್ ನಗರದ ಶ್ರೀ.ಪ್ರಸನ್ನ ಆಂಜನೇಯ ದೇವಸ್ಥಾನದಿಂದ ಆರಂಭಗೊಂಡ ಶೋಭಾ ಯಾತ್ರೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೊನೆಯಲ್ಲಿ ಶ್ರೀ ಪ್ರಸನ್ನ ಆಂಜನೇಯ ದೇವಸ್ಥಾನದಲ್ಲಿ ಸಂಪನ್ನಗೊಂಡಿತು.

ಶೋಭಯಾತ್ರೆಯಲ್ಲಿ ಶ್ರೀ.ಹನುಮ ಮಾಲಾಧಾರಿಗಳು ಹಾಗೂ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಕ್ತಾಭಿಮಾನಿಗಳು ಭಾಗವಹಿಸಿದ್ದರು