ಬೆಳಗಾವಿ ಗಡಿಯಲ್ಲಿ ಹೈಅಲರ್ಟ್: ಶಬರಿಮಲೆ, ಮಹಾರಾಷ್ಟ್ರದಿಂದ ಬರುವವರಿಗೆ RTPCR ಟೆಸ್ಟ್​​​ ಕಡ್ಡಾಯ

ಬೆಳಗಾವಿ, (ಡಿಸೆಂಬರ್ 21): ಕರ್ನಾಟಕದಲ್ಲಿ ಮತ್ತೆ ಕೊರೋನಾ  ಆತಂಕ ಶುರುವಾಗಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲೂ ಸಹ ಕಟ್ಟುನಿಟ್ಟಿನ ಕ್ರಮಕ್ಕೆ ಇಲ್ಲಿನ ಅಧಿಕಾರಿಗಳು ಮುಂದಾಗಿದ್ದಾರೆ. ಈ ಬಗ್ಗೆ ಇಂದು (ಡಿಸೆಂಬರ್ 21) ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಶಾಸಕ ಗಣೇಶ್​​ ಹುಕ್ಕೇರಿ ನೇತೃತ್ವದಲ್ಲಿ ಕೋವಿಡ್​​ ಸಭೆ ನಡೆದಿದ್ದು. ನೆಗಡಿ, ಕೆಮ್ಮು, ಜ್ವರದ ಲಕ್ಷಣ ಇದ್ದವರಿಗೆ ಆರ್​​ಟಿಪಿಸಿಆರ್​​​​ ಟೆಸ್ಟ್​​​ ಕಡ್ಡಾಯ ಹಾಗೂ ಕೇರಳದ ಶಬರಿಮಲೆಗೆ ತೆರಳಿದವರಿಗೂ ಕಡ್ಡಾಯವಾಗಿ ತಪಾಸಣೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರ, ಕರ್ನಾಟಕ ಗಡಿಯಲ್ಲಿ ಹೆಚ್ಚಿನ ನಿಗಾ ವಹಿಸುವ ಕುರಿತು ಚರ್ಚೆ ನಡೆದಿದ್ದು, ಡಿಸೆಂಬರ್​​ 23ರಿಂದ ಪ್ರತಿ ತಾಲೂಕಿನಲ್ಲಿ 5 ಸಾವಿರ ಕೋವಿಡ್​​ ತಪಾಸಣೆಗೆ ಸೂಚನೆ ನೀಡಲಾಗಿದೆ. ಪಿಹೆಚ್​​​​ಸಿ, ಸಿಹೆಚ್​​​ಸಿ ತಾಲೂಕು ಆಸ್ಪತ್ರೆಯಲ್ಲಿ RTPCR​​ ಟೆಸ್ಟ್​​​ಗೆ ನಿರ್ಧರಿಸಲಾಗಿದೆ.

ಮಹಾರಾಷ್ಟ್ರದಿಂದ ಬರುವವರ ಮೇಲೆ ಕೋವಿಡ್​​​ ತಪಾಸಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಗೇ ನೆಗಡಿ, ಕೆಮ್ಮು, ಜ್ವರದ ಲಕ್ಷಣ ಇದ್ದವರಿಗೆ ಆರ್​​ಟಿಪಿಸಿಆರ್​​​​ ಟೆಸ್ಟ್​​​ ಕಡ್ಡಾಯ ಮಾಡಲಾಗಿದ್ದು, ಕೇರಳದ ಶಬರಿಮಲೆಗೆ ತೆರಳಿದವರಿಗೂ ಕಡ್ಡಾಯ ತಪಾಸಣೆಗೆ ಸೂಚಿಸಲಾಗಿದೆ. ಅಲ್ಲದೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್​​ ಬೆಡ್​​​ ಇರಿಸಬೇಕೆಂದು ಶಾಸಕ ಗಣೇಶ್​​ ಹುಕ್ಕೇರಿ ಸೂಚನೆ ನೀಡಿದ್ದಾರೆ.

ಈ ಸಭೆಯಲ್ಲಿ ತಾಲೂಕು ಕಂದಾಯ ಇಲಾಖೆ, ಪೊಲೀಸ್, ಆರೋಗ್ಯ ಇಲಾಖೆ ಹಾಗೂ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು ಭಾಗಿಯಾಗಿದ್ದರು.