ತೇಜಸ್ವಿ ಯಾದವ್​​​ಗೆ ಮತ್ತೆ ಸಮನ್ಸ್ ನೀಡಿದ ಇಡಿ, ಜ.5ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ದೆಹಲಿ, ಡಿ.23: ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಉದ್ಯೋಗಕ್ಕಾಗಿ ಭೂಮಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ನೀಡಲಾಗಿದೆ. ಜನವರಿ 5ರಂದು ವಿಚಾರಣೆಗೆ ಹಾಜರಾಗುವಂತೆ ತೇಜಸ್ವಿ ಯಾದವ್ ಅವರಿಗೆ ಇಡಿ ನೀಡಿದೆ.

2004 ಮತ್ತು 2009 ರ ನಡುವೆ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಆಡಳಿತದಲ್ಲಿ ತೇಜಸ್ವಿ ಯಾದವ್ ಅವರ ತಂದೆ ಲಾಲು ಪ್ರಸಾದ್​​​ ಯಾದವ್ ರೈಲ್ವೆ ಸಚಿವರಾಗಿದ್ದಾಗ ಉದ್ಯೋಗಕ್ಕಾಗಿ ಭೂ ಹಗರಣ ನಡೆದಿತ್ತು. ರೈಲ್ವೆಯಲ್ಲಿ ಅನಿಯಮಿತ ನೇಮಕಾತಿಗಳನ್ನು ಮಾಡಲಾಗಿದೆ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಆರೋಪಿಸಿತ್ತು. ಲಾಲು ಪ್ರಸಾದ್​​​ ಯಾದವ್ ಅವರು ತನ್ನ ಆಪ್ತರ ನೇಮಕಾತಿಗಾಗಿ ಭಾರತೀಯ ರೈಲ್ವೇಯ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿತ್ತು.

ತನ್ನ ಸಂಬಂಧಿಕರಿಗೆ ರೈಲ್ವೆ ಉದ್ಯೋಗದ ಬದಲು ಭೂಮಿ ನೀಡಿದ್ದಾರೆ ಎಂಬ ಆರೋಪವನ್ನು ಮಾಡಲಾಗಿದೆ. ಇದರ ಜತೆಗೆ ಈ ಭೂಮಿಯನ್ನು ರಿಯಾಯಿತಿ ದರದಲ್ಲಿ ನೀಡಲಾಗಿದೆ ಎಂದು ಅಧಿಕಾರಿಗಳು ತನಿಖಾ ವರದಿಯಲ್ಲಿ ತಿಳಿಸಿದ್ದಾರೆ. ಆದರೆ ಇದರಲ್ಲಿ ನನ್ನ ತಪ್ಪು ಇಲ್ಲ, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಹೇಳಿದೆ.