ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಶ್ರೀಮತಿ ರೂಪಾಲಿ ಎಸ್.ನಾಯ್ಕ ನೇಮಕ

ಬೆಂಗಳೂರು ಡಿ.23 : ಭಾರತೀಯ ಜನತಾ ಪಾರ್ಟಿಯಿಂದ ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು, ರಾಜ್ಯ ಖಜಾಂಚಿ ಮತ್ತು ಮೋರ್ಚಾಗಳ ರಾಜ್ಯಾಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕಾರವಾರ – ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್‌ ನಾಯ್ಕ ಅವರನ್ನು ರಾಜ್ಯದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷ ಸಂಘಟನೆ ವಿಚಾರದಲ್ಲಿ ಕ್ಷೇತ್ರದಲ್ಲಿ ಸದಾ ಸಕ್ರೀಯವಾಗಿ ತೊಡಗಿಸಿಕೊಂಡಿರುವ ರೂಪಾಲಿಯವರಿಗೆ ಭಾರತೀಯ ಜನತಾ ಪಾರ್ಟಿ ಮಹತ್ವದ ಜವಾಬ್ದಾರಿಯನ್ನು ನೀಡಿದೆ…

ಭಾರತೀಯ ಜನತಾ ಪಾರ್ಟಿ ಒಟ್ಟು 10 ಮಂದಿ ಉಪಾಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಶ್ರೀಮತಿ ರೂಪಾಲಿ ಎಸ್‌ ನಾಯ್ಕ, ಮುರುಗೇಶ್‌ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನಾಯಕ್, ಎನ್.ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ಡಾ.ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್, ಎಂ.ರಾಜೇಂದ್ರ ನೇಮಕವಾಗಿದ್ದಾರೆ..

ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಎಸ್.ನಂದೀಶ್ ರೆಡ್ಡಿ, ಜೆ.ಪ್ರೀತಮ್ ಗೌಡ ಆಯ್ಕೆಯಾಗಿದ್ದಾರೆ..

ರಾಜ್ಯ ಕಾರ್ಯದರ್ಶಿಗಳಾಗಿ ಶೈಲೇಂದ್ರ ಬೆಲ್ದಾಳೆ, ಡಿ.ಎಸ್.ಅರುಣ್, ಬಸವರಾಜ ಮತ್ತೀಮೋಡ್, ಸಿ.ಮುನಿರಾಜು, ವಿನಯ್ ಬಿದರೆ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ.ಲಕ್ಷ್ಮಿ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್ ನೇಮಕೊಂಡಿದ್ದಾರೆ. ಇನ್ನು ರಾಜ್ಯ ಖಜಾಂಚಿಯಾಗಿ ಸುಬ್ಬ ನರಸಿಂಹ ಅವರನ್ನು ನೇಮಕ ಮಾಡಲಾಗಿದೆ…

ಮೋರ್ಚಾಗಳ ರಾಜ್ಯ ಅಧ್ಯಕ್ಷರು:

ಮಹಿಳಾ ಮೋರ್ಚಾ-ಸಿ.ಮಂಜುಳಾ
ಯುವ ಮೋರ್ಚಾ-ಧೀರಜ್ ಮುನಿರಾಜು
ಎಸ್.ಟಿ.ಮೋರ್ಚಾ-ಬಂಗಾರು ಹನುಮಂತು
ಎಸ್.ಸಿ.ಮೋರ್ಚಾ-ಎಸ್.ಮಂಜುನಾಥ್
ಹಿಂದುಳಿದ ವರ್ಗಗಳ ಮೋರ್ಚಾ-ರಘು ಕೌಟಿಲ್ಯ
ರೈತ ಮೋರ್ಚಾ-ಎ.ಎಸ್.ಪಾಟೀಲ್ ನಡಹಳ್ಳಿ
ಅಲ್ಪಸಂಖ್ಯಾತ ಮೋರ್ಚಾ-ಅನಿಲ್ ಥಾಮಸ್