ಜವಾಬ್ದಾರಿಯಿಂದ ಪಕ್ಷಸಂಘಟನೆಗಾಗಿ ಶಕ್ತಿಮೀರಿ ದುಡಿಯುತ್ತೇನೆ – ರೂಪಾಲಿ ಎಸ್‌. ನಾಯ್ಕ

ಕಾರವಾರ : ಭಾರತೀಯ ಜನತಾ ಪಾರ್ಟಿ ನನಗೆ ನೀಡಿದ ಜವಾಬ್ದಾರಿಯಿಂದ ಪಕ್ಷ ಸಂಘಟನೆಗಾಗಿ ಶಕ್ತಿಮೀರಿ ದುಡಿಯುತ್ತೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಕಾರವಾರ-ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ಶ್ರೀಮತಿ ರೂಪಾಲಿ ಎಸ್‌ ನಾಯ್ಕ ಹೇಳಿದ್ದಾರೆ…

ನನಗೆ ಈ ಹೊಣೆಗಾರಿಕೆಯನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ನಾಯಕರಾದ ಅಮಿತ್ ಶಾ, ಹಿರಿಯ ನಾಯಕರೂ, ಮಾಜಿ ಮುಖ್ಯಮಂತ್ರಿಗಳಾದ ಬಿ‌.ಎಸ್.ಯಡಿಯೂರಪ್ಪ, ಹಿರಿಯ ನಾಯಕರಾದ ಬಿ‌.ಎಲ್.ಸಂತೋಷ್, ರಾಜ್ಯ ಅಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಸಂಸದರಾದ ಅನಂತಕುಮಾರ್ ಹೆಗಡೆ, ಜಿಲ್ಲಾಧ್ಯಕ್ಷರಾದ ವೆಂಕಟೇಶ ನಾಯಕ, ಎಲ್ಲ ನಾಯಕರುಗಳು, ವಿಶೇಷವಾಗಿ ಕ್ಷೇತ್ರದ ಕಾರ್ಯಕರ್ತರು, ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ರೂಪಾಲಿ ನಾಯ್ಕ ತಿಳಿಸಿದ್ದಾರೆ..

ಮತ್ತೊಂದೆಡೆ ಕಾರವಾರ ಅಂಕೋಲಾ ಕ್ಷೇತ್ರದ ಜನರು, ರೂಪಾಲಿಯವರಿಗೆ ಬಿಜೆಪಿ ಉಪಾಧ್ಯಕ್ಷ ಹುದ್ದೆ ಸಿಕ್ಕಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮೆಲ್ಲರ ನೆಚ್ಚಿನ ಮಾಜಿ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ ಅವರಿಗೆ ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಹುದ್ದೆ ನೀಡಿದ್ದು, ನಮ್ಮ ಉತ್ತರ ಕನ್ನಡ ಜಿಲ್ಲೆಯ ಮಹಿಳೆಯರು ಸೇರಿದಂತೆ ಜಿಲ್ಲೆಯ ಜನರಿಗೆ ಅತೀವ ಸಂತಸವಾಗಿದೆ. ಮುಂದೆಯೂ ಅವರಿಗೆ ಇನ್ನೂ ಹೆಚ್ಚಿನ ಸ್ಥಾನಮಾನಗಳು ಸಿಗಲಿ ಎಂದು ಕ್ಷೇತ್ರದ ಜನರು ಹಾಗೂ ಜಿಲ್ಲೆಯ ಜನರು ಹರ್ಷ ವ್ಯಕ್ತಪಡಿಸಿದ್ದಾರೆ…