ಗೋಕರ್ಣಕ್ಕೆ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ ಗಣಪತಿ ಉಳ್ವೇಕರ್

ಗೋಕರ್ಣ: ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ ಪುರಾಣ ಪ್ರಸಿದ್ದ ಮಹಾಬಲೇಶ್ವರ ದೇವಾಲಯಕ್ಕೆ ಶನಿವಾರ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು. ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯ ವೇ. ಮಹಾಬಲ ಉಪಾಧ್ಯ ಪೂಜಾ ಕೈಂಕರ್ಯ ನೆರವೇರಿಸಿ, ಮಂದಿರದ ವತಿಯಿಂದ ಗೌರವಿಸಿ ಪ್ರಸಾದ ನೀಡಿದರು.

ಇದಕ್ಕೂ ಮೊದಲು ಮಹಾಗಣಪತಿ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಎರಡು ದೇವಾಲಯದ ಭೇಟಿ ನಂತರ ತಾಮ್ರಗೌರಿ ಮಂದಿರಕ್ಕೆ ತೆರಳಿ ದೇವಿ ದರ್ಶನ ಪಡೆದರು. ಈ ವೇಳೆ ಬಿ.ಜೆ. ಪಿ. ಪಕ್ಷದ ಕುಮಟಾ ಮಂಡಲದ ಮಾಜಿ ಅಧ್ಯಕ್ಷ ಕುಮಾರ ಮಾರ್ಕಾಂಡೆ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ ಅಧ್ಯಕ್ಷ ಮಂಜುನಾಥ ಜನ್ನು, ಮಾಜಿ ಗ್ರಾಂ. ಪಂ. ಅಧ್ಯಕ್ಷ ನಾಗರಾಜ ಹಿತ್ತಲಮಕ್ಕಿ, ಗ್ರಾಂ. ಪಂ. ಸದಸ್ಯ ಶೇಖರ ನಾಯ್ಕ ಮತ್ತಿತರ ಕಾರ್ಯಕರ್ತರು ಉಳ್ವೇಕರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಪಿ.ಐ. ವಸಂತ ಆಚಾರ್ , ಪಿ.ಎಸ್.ಐ. ಸುಧಾ ಅಘನಾಶಿನಿ ಮತ್ತು ಪೊಲೀಸ್ ಸಿಬ್ಬಂದಿ ಸೂಕ್ತ ಬಂದೂವಸ್ತ ಏರ್ಪಡಿಸಿದ್ದರು.