ಸಿದ್ದಾಪುರದ ತಾಲೂಕಾ ಕಛೇರಿಯಲ್ಲಿ ವಿಶ್ವ ಮಾನವ ದಿನಾಚರಣೆ

ಸಿದ್ದಾಪುರ : ತಾಲೂಕು ಆಡಳಿತದ ವತಿಯಿಂದ ತಾಲೂಕಾ ಕಛೇರಿಯಲ್ಲಿ ವಿಶ್ವ ಮಾನವ ದಿನಾಚರಣೆ ಆಚರಿಸಲಾಯಿತು. ತಹಸೀಲ್ದಾರ್ ಎಂ ಆರ್ ಕುಲ್ಕರ್ಣಿ ರವರು ಕುವೆಂಪು ಭಾವ ಚಿತ್ರಕ್ಕೆ ಪುಷ್ಪ ಅರ್ಚನೆ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ಕುವೆಂಪು ರವರ ಆದರ್ಶ ತತ್ವ ಗಳು ಕುರಿತು ವಿವರವಾಗಿ ತಿಳಿಸಿ ಅವುಗಳನ್ನ ಅಳವಡಿಸಿಕೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.