ಸಿದ್ದಾಪುರದ ಶಂಕರಮಠದಲ್ಲಿ ಮಹಿಳಾ ಸಮಾವೇಶ

ಸಿದ್ದಾಪುರ: ರಾಜ್ಯದ ಕಾಂಗ್ರೆಸ್ ಸರ್ಕಾರ ಮಹಿಳೆಯರನ್ನು ಶಕ್ತರನ್ನಾಗಿಸಲು ಜನಪರ ಯೋಜನೆ ಅನುಷ್ಠಾನಗೊಳಿಸಿದ್ದು, ಸಿದ್ದಾಪುರ ತಾಲೂಕಿನಲ್ಲಿ ಗಾರ್ಮೆಂಟ್ಸ್ ತೆರೆಯಲು ಸರ್ಕಾರದ ಮಟ್ಟದಲ್ಲಿ ಒತ್ತಡ ಹಾಕಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಮನುವಿಕಾಸ ಸಂಸ್ಥೆ ಶಿರಸಿ ಮತ್ತು ಇಡಲಗೀವ್ ಪೌಂಡೇಶನ್ ವತಿಯಿಂದ ಸಿದ್ದಾಪುರದ ಶಂಕರಮಠದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಿಳಾ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರ ಮಾತನಾಡಿ ಮಹಿಳಾ ಸಂಘಟನೆಗಳು ಗಟ್ಟಿಯಾಗಬೇಕು. ಸಂಘ-ಸಂಸ್ಥೆಗಳ ಮೂಲಕ ಸ್ತ್ರೀಯರ ಸ್ವಾವಲಂಭನೆ ಹೆಚ್ಚಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಅತಿ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ. ಬದುಕುವ ದಾರಿ ಹೇಳಿಕೊಡುವವರನ್ನು ಯಾರು ಮರೆಯಬಾರದು. ಮಹಿಳೆಯರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಎಂದು ಕರೆ ನೀಡಿದರು