ದಾಂಡೇಲಿಯ ನವಗ್ರಾಮ ಮತ್ತು ಕೋಗಿಲಬನದಲ್ಲಿ ಮಾದಕ ದ್ರವ್ಯ ವಿರೋಧಿ ಜಾಥಾ

ದಾಂಡೇಲಿ : ಗ್ರಾಮೀಣ ಪೊಲೀಸ್ ಠಾಣೆಯ ಆಶ್ರಯದಡಿ ತಾಲೂಕಿನ ಅಂಬೇವಾಡಿಯ ನವಗ್ರಾಮ‌ ಮತ್ತು ಕೋಗಿಲಬನದಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ‌ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಸಿಪಿಐ ಭೀಮಣ್ಣ.ಎಂ.ಸೂರಿ ಅವರು ಜಾಗೃತಿ ಜಾಥಾಕ್ಕೆ ಚಾಲನೆಯನ್ನು ನೀಡಿದರು. ಪಿಎಸ್ಐಗಳಾದ ಕೃಷ್ಣ ಅರಕೇರಿ, ಜಗದೀಶ್, ಎಎಸ್ಐಗಳಾದ ವೆಂಕಟೇಶ್ ತೆಗ್ಗಿನ್, ಪ್ರಕಾಶ್ ತಳವಾರ್ ಹಾಗೂ ಪೊಲೀಸ್ ಸಿಬ್ಬಂದಿ ವರ್ಗದವರು ಮತ್ತು ಸ್ಥಳೀಯ ಶಾಲೆಯ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.