ಉಳವಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ಶ್ರೀ.ಅಯ್ಯಪ್ಪ ಸ್ವಾಮಿಯ ಪೂಜಾ ಕಾರ್ಯಕ್ರಮ

ಜೋಯಿಡಾ : ಶ್ರೀ.ಅಯ್ಯಪ್ಪ ಸೇವಾ ಸಮಿತಿ ಮತ್ತು ಸ್ಥಳೀಯ ಭಕ್ತಾಭಿಮಾನಿಗಳ ಸಹಕಾರದಡಿ ತಾಲೂಕಿನ‌ ಉಳವಿಯಲ್ಲಿ ಶ್ರೀ.ಅಯ್ಯಪ್ಪ ಸ್ವಾಮಿಯ ಪೂಜಾ ಕಾರ್ಯಕ್ರಮವು ಮಂಗಳವಾರ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತು.

ಬೆಳಿಗ್ಗೆಯಿಂದಲೆ ಶ್ರೀ.ಅಯ್ಯಪ್ಪ ಸ್ವಾಮಿಯ ವಿವಿಧ ಪೂಜಾರಾಧನೆಗಳು ಜರುಗಿತು. ಪೂಜಾ ಕಾರ್ಯಕ್ರಮದ ಜೊತೆಯಲ್ಲಿ ಸಾಮೂಹಿಕವಾಗಿ ಶ್ರೀ.ಅಯ್ಯಪ್ಪನ ಭಜನಾ ಕಾರ್ಯಕ್ರಮವು ಜರುಗಿತು. ಮಹಾಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ಗುರುಸ್ವಾಮಿ ಈಶ್ವರ ಹಿರೇಮಠ್ ಅವರ ನೇತೃತ್ವದಲ್ಲಿ ನಡೆದ
ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಶ್ರೀ.ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ಸ್ಥಳೀಯ ಭಕ್ತಾಭಿಮಾನಿಗಳು ಶ್ರಮಿಸಿದ್ದರು.