ನಗರ ಸಭೆಯ ನೂತನ ಸ್ಥಾಯಿ‌ ಸಮಿತಿ ಅಧ್ಯಕ್ಷೆ ಶಾಹಿದಾ ಪಠಾಣ್ ಅವರನ್ನು ಭೇಟಿ ಮಾಡಿದ ಮಹಿಳಾ ಕಾಂಗ್ರೆಸ್ ನಿಯೋಗ

ದಾಂಡೇಲಿ : ನಗರಸಭೆಯ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಹಿದಾ ಪಠಾಣ್ ಅವರನ್ನು ನಗರದ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಬಂದಂ ಅವರ ನೇತೃತ್ವದ ನಿಯೋಗ ಗುರುವಾರ ಭೇಟಿ ಮಾಡಿ, ಅಭಿನಂದನೆಗಳನ್ನು ಸಲ್ಲಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ್ದ ರೇಣುಕಾ ಬಂದಂ ಅವರು ಶಾಹಿದಾ ಪಠಾಣ್ ಅವರ ಅಧ್ಯಕ್ಷತೆಯ ಸ್ಥಾಯಿ ಸಮಿತಿಯು ನಗರದ ಪ್ರಗತಿಗೆ ತನ್ನದೇ ಆದ ರೀತಿಯಲ್ಲಿ ಬಹುಮೂಲ್ಯ ಕೊಡುಗೆಯನ್ನು ನೀಡುವಂತಾಗಲಿ ಎಂದು ಶುಭವನ್ನು ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಹಿದಾ ಪಠಾಣ್ ಅವರು ದೊರೆತ ಅವಕಾಶವನ್ನು ನಗರದ ಅಭಿವೃದ್ಧಿಗೆ ಸದ್ಬಳಕೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಪ್ರಮೀಳಾ ಮಾನೆ, ರೇಣುಕಾ ಭಜಂತ್ರಿ ಸರಸ್ವತಿ ಚೌವ್ಹಾಣ್, ರೇಣುಕಾ ಮಾದರ, ವಿದ್ಯಾ ಪಾಟೀಲ್, ಆಯಿಷಾ ಮುಕಾಶಿ, ಗೀತಾ ಗವಸ ಸೇರಿದಂತೆ ಕಾಂಗ್ರೆಸ್ ಮಹಿಳಾ ಪ್ರಮುಖರು ಉಪಸ್ಥಿತರಿದ್ದರು.