ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಡೆ

ಮಂಗಳೂರು: ಆಳಸಮುದ್ರ ಮೀನುಗಾರಿಕೆಗೆ ತೆರಳಿದಾಗ ಭಾರೀ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಮುಳುಗಡೆಯಾಗಿದೆ. ಮಂಗಳೂರಿನ ಬಂದರಿನಿಂದ ಮೀನುಗಾರಿಕೆಗೆ ಬೋಟ್ ತೆರೆಳಿತ್ತು. ಭಾರೀ ಅಲೆ ಅಪ್ಪಳಿಸಿದ್ದರಿಂದ ಮುಳುಗಡೆಯಾಗಿದೆ. ಇನ್ನು ಈ ದೃಶ್ಯವು ಮತ್ತೊಂದು ಬೋಟ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾನೆ. ಮಂಗಳೂರಿನ ಕೃಷ್ಣ ಕುಮಾರ್ ಎಂಬವರಿಗೆ ಸೇರಿದ ಬೋಟ್ ಇದಾಗಿದೆ.

ಇನ್ನು ಸಮುದ್ರದಲ್ಲಿ ಮುಳುಗುತ್ತಿದ್ದ ಬೋಟ್​ನಲ್ಲಿ 10 ಮಂದಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಮೀನುಗಾರಿಕೆಗೆ ತೆರಳಿದ್ದ ಇತರ ಮೀನುಗಾರಿಕಾ ಬೋಟ್​ಗಳಲ್ಲಿದ್ದವರು ಎಲ್ಲರನ್ನು ರಕ್ಷಣೆ ಮಾಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.