ಹಳಿಯಾಳ‌ ಪಟ್ಟಣದಲ್ಲಿ ವಿವಿಧ ಪ್ರತಿಮೆಗಳ ಸ್ವಚ್ಚತಾ ಕಾರ್ಯಕ್ರಮ

ಹಳಿಯಾಳ : ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿರುವ ಹಿನ್ನೆಲೆ ದೇಶದಾದ್ಯಂತ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿದ ಹಿನ್ನಲೆಯಲ್ಲಿ ಹಳಿಯಾಳ ಮಾಜಿ ಶಾಸಕರಾದ ಸುನೀಲ್ ಹೆಗಡೆ ಅವರ ಮಾರ್ಗದರ್ಶನದಲ್ಲಿ 3ನೇ ದಿನವಾದ ಬುಧವಾರ ಪಟ್ಟಣದ ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ಶ್ರೀ.ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಸುಭಾಸ್ ಚಂದ್ರ ಬೋಸ್ ಅವರ ಪುತ್ಥಳಿಗಳನ್ನು ಹಾಗೂ ಸುತ್ತಮುತ್ತಲಿನ ಆವರಣವನ್ನು ಬಿಜೆಪಿ ಕಾರ್ಯಕರ್ತರು ಸ್ವಚ್ಛಗೊಳಿಸಿದರು.

ಈ ಸಂದರ್ಭದಲ್ಲಿ ಸ್ವಚ್ಛತಾ ಅಭಿಯಾನದ ಸಂಚಾಲಕರಾದ ಸಂತೋಷ ಘಟಕಾಂಬಳೆ, ಪುರಸಭೆ ಸದಸ್ಯರಾದ ಉದಯ ಹೂಲಿ, ರೂಪಾ ಗಿರಿ, ಪ್ರಮುಖರಾದ ಮಂಜುನಾಥ ಪಂಡಿತ, ವಿಲಾಸ ಯಡವಿ, ಉಲ್ಲಾಸ ಬೀಡಿಕರ, ಪ್ರದೀಪ ಹಿರೆೇಕರ, ಶ್ರೀನಿವಾಸ ದೊಡ್ಡಮನಿ, ಶಿವಾನಂದ ಶೆಟ್ಟರ, ಆಕಾಶ ಉಪ್ಪಿನ, ಸುನೀಲ್ ‌ಬಾಗಳೆ, ಪುಂಡ್ಲೀಕ ಮುನವಳ್ಳಿ, ರಘುನಾಥ ಮಾದರ, ಜಯಲಕ್ಷ್ಮೀ ಚವ್ಹಾಣ, ಮಾಲಾ ಹುಂಡೇಕರ, ಮೊದಲಾದವರು ಉಪಸ್ಥಿತರಿದ್ದರು.