ರಾಜ್ಯ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಬಸವರಾಜ ಪಾಟೀಲರಿಗೆ ಹಳಿಯಾಳದಲ್ಲಿ ಸನ್ಮಾನ‌

ಹಳಿಯಾಳ : ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವದ ಆಮಂತ್ರಣವನ್ನು ನೀಡಲು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿಯ ಸದಸ್ಯರಾದ ಬಸವರಾಜ ಪಾಟೀಲ ಅವರು ಶುಕ್ರವಾರಕ್ಕೆ ಹಳಿಯಾಳ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಬಸವರಾಜ ಪಾಟೀಲ ಅವರು ಸುವರ್ಣ ಮಹೋತ್ಸವ ಆಚರಣೆಯ ಮಾಹಿತಿಯನ್ನು ನೀಡಿ, ಸರ್ವ ಸದಸ್ಯರು ಕುಟುಂಬ ಸಮೇತರಾಗಿ ಆಗಮಿಸಿ, ಈ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಮೊದಲ ಬಾರಿಗೆ ತಾಲೂಕು ಪತ್ರಕರ್ತರ ಸಂಘದ ಕಾರ್ಯಾಲಯಕ್ಕೆ ಭೇಟಿ ನೀಡಿದ ಬಸವರಾಜ ಪಾಟೀಲ ಅವರನ್ನು ಹಳಿಯಾಳದ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಂತೋಷ ಹಬ್ಬು, ಕಾರ್ಯದರ್ಶಿ ಮಂಜುನಾಥ ಶೇರಖಾನೆ, ಖಜಾಂಚಿ ವಿನಾಯಕ ಮೇಟಿ, ದೇವಿದಾಸ್ ನಾಯ್ಕ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಓರ್ವಿಲ್ ಫರ್ನಾಂಡೀಸ್ ಉಪಸ್ಥಿತರಿದ್ದರು.