ಚುನಾವಣಾ ಆಯೋಗದ ರಾಜ್ಯಮಟ್ಟದ ಪ್ರಶಸ್ತಿಗೆ ಪ್ರಪ್ರಥಮವಾಗಿ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ

ಕಾರವಾರ : ರಾಷ್ಟ್ರೀಯ ಮತದಾರರ ದಿನದ ವಿಶೇಷವಾಗಿ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡಿದ ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಸ್ವೀಪ್‌ ನೋಡಲ್‌ ಅಧಿಕಾರಿಗಳಿಗೆ ಚುನಾವಣಾ ಆಯೋಗ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಪ್ರಪ್ರಥಮವಾಗಿ ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕುಮಾರ್ ಕಾಂದೂ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಈಶ್ವರ್‌ ಕುಮಾರ್‌ ಕಾಂದೂ ಅವರು ವಿಭಿನ್ನ ರೀತಿಯಲ್ಲಿ ಜಿಲ್ಲೆಯಲ್ಲಿ ಸ್ವೀಪ್‌ ಕಾರ್ಯಕ್ರಮಗಳಾದ ಬೋಟ್‌, ಬೈಕ್‌, ವಿಶೇಷಚೇತನರ ಬೈಕ್ ರ‍್ಯಾಲಿ, ಯುವ ಸಂವಾದ, ಸ್ಕೂಬಾ ಡೈವಿಂಗ್‌, ರಿವರ್‌ ರ‍್ಯಾಫ್ಟಿಂಗ್, ಹಿರಿಯ ನಾಗರಿಕರ ಆರೋಗ್ಯ ತಪಾಸಣೆ, ಮಾದರಿ ಮತಗಟ್ಟೆಗಳು ಹಾಗೂ ಫಲಪುಷ್ಪ ಪ್ರದರ್ಶನಗಳನ್ನು ನಡೆಸಿದ್ರು. ಹೀಗೆ ವಿವಿಧ ವಿನೂತನ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಯುವ ಮತದಾರರು, ಹಿರಿಯ ನಾಗರಿಕರು, ಸಾಗರೋತ್ತರ ಮತದಾರರನ್ನು ಆಕರ್ಷಿಸಿದ್ರು. ಹಾಗೇ ಮತದಾನದಲ್ಲಿ ಭಾಗವಹಿಸಿ ಹೆಚ್ಚು ಮತದಾನವಾಗುವಂತೆ ಮಾಡುವಲ್ಲಿ ಸಿಇಒ ಈಶ್ವರ ಕುಮಾರ್ ಕಾಂದೂ ಅವರು ಶ್ರಮಿಸಿದ್ದರು. ಇಂತಹ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಚುನಾವಣಾ ಆಯೋಗದ ಗಮನ ಸೆಳೆದಿದ್ದರು. ಇದೆಲ್ಲವನ್ನು ಪರಿಗಣಿಸಿ ಚುನಾವಣಾ ಆಯೋಗ ‌ಈಶ್ವರ್‌ ಕುಮಾರ್‌ ಕಾಂದೂ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ.