ಇಂದಿರಾನಗರದಲ್ಲಿ ಶ್ರೀರಾಮ ಪ್ರಾಣಪ್ರತಿಷ್ಟಾಪನೆಯ ಸಂಭ್ರಮ

ಹಳಿಯಾಳ : ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಪಟ್ಟಣದ ಇಂದಿರಾ ನಗರದಲ್ಲಿ ಶ್ರೀರಾಮೋತ್ಸವ ಕಾರ್ಯಕ್ರಮವನ್ನು ಸಂಭ್ರಮ, ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಹಮ್ಮಿಕೊಳ್ಳಲಾಯಿತು.

ಬೆಳಿಗ್ಗೆನಿಂದಲೆ ವಿಶೇಷ ಪೂಜೆ ಸಾಮೂಹಿಕ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಿಹಿಯನ್ನು ಹಂಚಿ ಪ್ರಸಾದವನ್ನು ವಿತರಿಸಲಾಯಿತು. ಇಂದಿರಾ ನಗರದ ನಿವಾಸಿಗಳು ಹಾಗೂ ಸಿದ್ದರಾಮೇಶ್ವರ ಗಲ್ಲಿಯ ನಿವಾಸಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಒಟ್ಟಿನಲ್ಲಿ ಇಂದಿರಾ ನಗರದಲ್ಲಿ ಅಯೋಧ್ಯೆಯ ಸಂಭ್ರಮ ಮನೆ ಮಾಡಿತ್ತು.