ಜೋಯಿಡಾದಲ್ಲಿ ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವಕ್ಕೆ ಆಮಂತ್ರಣ

ಜೋಯಿಡಾ : ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾಂಭದ ಆಮಂತ್ರಣ ಪತ್ರಿಕೆಯನ್ನು ಪತ್ರಕರ್ತರ ಸಂಘದ‌ ಜಿಲ್ಲಾ ಕಾರ್ಯದರ್ಶಿ ಹಾಗೂ ತಾಲೂಕಿನ ಹಿರಿಯ ಪತ್ರಕರ್ತರಾದ ಅನಂತ ದೇಸಾಯಿ ಮತ್ತು ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಹರೀಶ್ ಭಟ್ ಅವರು ಜೋಯಿಡಾದಲ್ಲಿ ತಹಶೀಲ್ದಾರ್ ಮಂಜುನಾಥ್ ಮುನ್ನೋಳ್ಳಿ ಮತ್ತು ತಾ.ಪಂ‌ ಕಾರ್ಯನಿರ್ವಹಣಾಧಿಕಾರಿ ಆನಂದ ಬಡಕುಂದ್ರಿಯವರಿಗೆ ನೀಡಿ ಕಾರ್ಯಕ್ರಮಕ್ಕೆ ಗೌರವಪೂರ್ವಕವಾಗಿ ಆಮಂತ್ರಿಸಿದರು.