ಕುಮಟಾದ ಹವ್ಯಕ ಸಭಾಭವನದಲ್ಲಿ ಬಿಜೆಪಿಯ ನೂತನ  ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ

ಕುಮಟಾ : ಕುಮಟಾದ ಹವ್ಯಕ ಸಭಾಭವನದಲ್ಲಿ ಬಿಜೆಪಿಯ ನೂತನ  ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ ನಡೆಯಿತು.

ನೂತನ ಅಧ್ಯಕ್ಷರಾದ ಶ್ರೀ ಎನ್. ಎಸ್. ಹೆಗಡೆ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ವೆಂಕಟೇಶ ನಾಯ್ಕ ಅವರಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷರು, ಕಾರವಾರ ಅಂಕೋಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀಮತಿ ರೂಪಾಲಿ ಎಸ್. ನಾಯ್ಕ ‌ಅವರು ಸನ್ಮಾನಿಸಿ ಗೌರವಿಸಿದರು…  

ಈ ಸಮಾರಂಭದಲ್ಲಿ ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಶ್ರೀಮತಿ ರೂಪಾಲಿ ಎಸ್‌ ನಾಯ್ಕ, ಶಾಸಕ ದಿನಕರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಮಾಜಿ ಶಾಸಕರಾದ ಸುನೀಲ ನಾಯ್ಕ, ಸುನೀಲ ಹೆಗಡೆ, ರಾಜ್ಯ ಬಿಜೆಪಿ ವಕ್ತಾರ ಪ್ರಕಾಶ ಕೊಣೆಮನೆ, ಎಮ್.ಜಿ.ನಾಯ್ಕ, ಶಶಿಭೂಷಣ ಹೆಗಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ, ತಾಲೂಕಿನ ಪದಾಧಿಕಾರಿಗಳು, ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ರು…