ತಿರುಪತಿ ತಿರುಮಲ‌ ದೇವಸ್ಥಾನದ ಆಡಳಿತ ಮಂಡಳಿ ಸಭೆಯಲ್ಲಿ ದೇಶಪಾಂಡೆ ಭಾಗಿ

ದಾಂಡೇಲಿ :ತಿರುಮಲದ ಅನ್ನಮಯ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ತಿರುಮಲ ತಿರುಪತಿ ದೇವಸ್ಥಾನದ ಧರ್ಮಕರ್ತರ ಆಡಳಿತ ಮಂಡಳಿಯ ಸಭೆಯಲ್ಲಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆಯವರು ಭಾಗವಹಿಸಿದ್ದರು.

ಟಿ. ಟಿ. ಡಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಬುಮನ ಕರುಣಾಕರ ರೆಡ್ಡಿಯವರು ಮತ್ತು ಕಾರ್ಯನಿರ್ವಾಹಣಾಧಿಕಾರಿ ಎ. ವಿ. ಧರ್ಮ ರೆಡ್ಡಿಯವರು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿದ್ದ ಈ ಸಭೆಯಲ್ಲಿ 2024-25ನೇ ಸಾಲಿನ ಹಲವು ಯೋಜನೆಗಳ ಕುರಿತು ಚರ್ಚಿಸಲಾಯಿತು.