ಸಿದ್ದಾಪುರದಲ್ಲಿ ಹುಲ್ಲಿನ ಬಣವೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಅಪಾರ ನಷ್ಟ

ಸಿದ್ದಾಪುರ : ಗದ್ದೆಯ ಅಂಚಿನಲ್ಲಿ ಬತ್ತವನ್ನ ಬೇರ್ಪಡಿಸಿ ರೈತರು ಸಂಗ್ರಹಿಸಿಟ್ಟಿದ್ದ ಹುಲ್ಲಿನ ಬಣವೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವಾದ ಘಟನೆ ತಾಲೂಕಿನ ಸಾಗರ ಸಿದ್ದಾಪುರ ಮುಖ್ಯ ರಸ್ತೆಯ ಗೋಳಗೊಡ್ ಕ್ರಾಸ್ ಬಳಿ ಸಮೀಪದಲ್ಲಿ ಸಂಭವಿಸಿದೆ.
ಬೆಂಕಿಯಿಂದಾಗಿ ಮುಖ್ಯ ರಸ್ತೆಯಲ್ಲಿ ಹೊಗೆಯು ಆವರಿಸಿದ್ದು ವಾಹನ ಸಂಚಾರಕ್ಕೆ ಕೆಲ ಸಮಯ ಆಡಚಣೆ ಉಂಟಾಯಿತು. ಗಮನಿಸಿದ ವಾಹನ ಸವಾರರು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ, ಕೂಡಲೇ ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಆಗುವ ಹೆಚ್ಚಿನ ಅಪಾಯವನ್ನು ತಡೆದಿದ್ದಾರೆ.