Union Budget 2024 : ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ: ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಧ್ಯಂತರ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್‌ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಹಾಗೆಯೇ ಪ್ರಧಾನಿ ಮೋದಿ (Narendra Modi) ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್‌ ಕೂಡ ಇದಾಗಿರಲಿದೆ.

ನೇರ ನಗದು ವರ್ಗಾವಣೆ

ಗರೀಬ್ ಕಲ್ಯಾಣ್ ದೇಶ್​ ಕಾ ಕಲ್ಯಾಣ್: ಬಡವರ ಶ್ರೇಯೋಭಿವೃದ್ಧಿಯಲ್ಲಿ ನಾವು ನಂಬಿಕೆ ಇಟ್ಟಿದ್ದೇವೆ. ಸಬ್​ ಕಾ ಸಾಥ್ ಧ್ಯೇಯದೊಂದಿಗೆ ಸರ್ಕಾರವು 25 ಕೋಟಿ ಜನರಿಗೆ ಬಡತನದಿಂದ ಹೊರಬರುವಂತೆ ಮಾಡಲು ನೆರವಾಗಿದೆ. ನೇರ ನಗದು ವರ್ಗಾವಣೆ ಮೂಲಕ 34 ಲಕ್ಷ ಕೋಟಿ ರೂಪಾಯಿಯನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ.

ಸೋಲಾರ್ ಸಂಪರ್ಕ

ಸೋಲಾರ್ ಸಂಪರ್ಕ ಯೋಜನೆಯು 1 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಖಾತರಿಪಡಿಸುತ್ತದೆ. ಇದು ವಾರ್ಷಿಕ 15,000 – 18,000 ರೂಪಾಯಿ ಉಳಿತಾಯ ಮಾಡಲು ಕುಟುಂಬಗಳಿಗೆ ನೆರವಾಗಲಿದೆ.

ತೆರಿಗೆ ಪ್ರಮಾಣದಲ್ಲಿ ಹೆಚ್ಚಳ

ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ 3 ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ.

24ನೇ ಹಣಕಾಸು ವರ್ಷದ ಅಂದಾಜು ವೆಚ್ಚ

24ನೇ ಹಣಕಾಸು ವರ್ಷದ ಅಂದಾಜು ವೆಚ್ಚವನ್ನು 44.90 ಲಕ್ಷ ಕೋಟಿ ರೂ.ಗೆ ಪರಿಷ್ಕರಿಸಲಾಗಿದೆ. ಪೂರೈಕೆ ಸರಪಳಿಗಳು, ಪ್ರಾಥಮಿಕ ಮತ್ತು ಮಾಧ್ಯಮಿಕ ಸಂಸ್ಕರಣೆ, ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್ ಸೇರಿದಂತೆ ಸುಗ್ಗಿಯ ನಂತರದ ಚಟುವಟಿಕೆಗಳಲ್ಲಿ ಖಾಸಗಿ ಮತ್ತು ಸಾರ್ವಜನಿಕ ಹೂಡಿಕೆಯನ್ನು ಸರ್ಕಾರವು ಮತ್ತಷ್ಟು ಉತ್ತೇಜಿಸುತ್ತದೆ.

ಮಧ್ಯಂತರ ಬಜೆಟ್​ ಬಗ್ಗೆ ಪೂನಂ ಮಹಾಜನ್ ಮಾತು

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಮಹಿಳೆ ರಾಷ್ಟ್ರವನ್ನು ಸಶಕ್ತಗೊಳಿಸುತ್ತಾಳೆ-ಬಿಜೆಪಿ ಸಂಸದೆ ಪೂನಂ ಮಹಾಜನ್

ಅತ್ಯಂತ ಕಡಿಮೆ ಸಮಯದ ಬಜೆಟ್​ ಮಂಡನೆ

ಅತ್ಯಂತ ಕಡಿಮೆ ಸಮಯದಲ್ಲಿ ಬಜೆಟ್​ ಮಂಡನೆ ಮಾಡಿದ್ದಾರೆ, ಆತ್ಮವಿಶ್ವಾಸ, ಭರವಸೆ ಎಲ್ಲವೂ ಅಸ್ಪಷ್ಟವಾಗಿತ್ತು-ಶಶಿತರೂರ್

ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲಾಗುವುದು

ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲಾಗುವುದು-ನಿರ್ಮಲಾ ಸೀತಾರಾಮನ್

ಖಾಸಗಿ ವಲಯಕ್ಕೆ ಸರ್ಕಾರ ಅವಕಾಶ

ಮಾರುಕಟ್ಟೆಯಿಂದ ಹೆಚ್ಚಿನ ಹಣವನ್ನು ಸಂಗ್ರಹಿಸಲು ಖಾಸಗಿ ವಲಯಕ್ಕೆ ಸರ್ಕಾರ ಅವಕಾಶ ನೀಡುತ್ತದೆ: ನಿರ್ಮಲಾ ಸೀತಾರಾಮನ್

ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ: ನಿರ್ಮಲಾ ಸೀತಾರಾಮನ್

ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ: ನಿರ್ಮಲಾ ಸೀತಾರಾಮನ್

ನೇರ ತೆರಿಗೆ ಪ್ರಮಾಣ ಹೆಚ್ಚಳ

ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3 ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ.-ನಿರ್ಮಲಾ

ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಪ್ರಯೋಜನ

ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಪ್ರಯೋಜನಗಳ ವಿಸ್ತರಿಸಣೆ ಮಾಡಲಾಗುತ್ತದೆ. ಬಾಡಿಗೆ ಮನೆಗಳು, ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸ ಮನೆಯನ್ನು ಖರೀದಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ನೆರವು ನೀಡಲಾಗುತ್ತದೆ.

ವಿತ್ತೀಯ ಕೊರತೆಯ ಮೇಲೆ ಹಿಡಿತ ಸಾಧಿಸಲಾಗಿದೆ

ವಿತ್ತೀಯ ಕೊರತೆಯ ಮೇಲೆ ಹಿಡಿತ ಸಾಧಿಸಲಾಗಿದೆ. 23-24ನೇ ಹಣಕಾಸು ವರ್ಷಕ್ಕೆ ಪರಿಷ್ಕೃತ ವಿತ್ತೀಯ ಕೊರತೆ ಶೇ 5.8 ನಿಗದಿಪಡಿಸಲಾಗಿದೆ.

ಕಿಸಾನ್ ಸಂಪದ ಯೋಜನೆ

ಕಿಸಾನ್ ಸಂಪದ ಯೋಜನೆಯಿಂದ 38 ಲಕ್ಷ ರೈತರಿಗೆ ಲಾಭವಾಗಿದೆ. ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಿಸಲಾಗುವುದು. ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಿಸುತ್ತೇವೆ.

 ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು

ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು-ನಿರ್ಮಲಾ ಸೀತಾರಾಮನ್

ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ

ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ-ನಿರ್ಮಲಾ ಸೀತಾರಾಮನ್

  • ಮೆಟ್ರೋ ರೈಲು ಇತರ ನಗರಗಳಿಗೂ ವಿಸ್ತರಿಸಲಾಗುವುದುಮೆಟ್ರೋ ರೈಲು ಇತರ ನಗರಗಳಿಗೂ ವಿಸ್ತರಿಸಲಾಗುವುದು-ನಿರ್ಮಲಾ

ಲಖ್​ಪತಿ ದೀದಿ ಯೋಜನಾ

2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲಖ್​ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು.ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು.

ಮೀನುಗಾರಿಕೆ ಯೋಜನೆಯನ್ನು ಉತ್ತೇಜಿಸಲು ಸರ್ಕಾರ ಕೆಲಸ ಮಾಡುತ್ತದೆ.

ಮೀನುಗಾರಿಕೆ ಯೋಜನೆಯನ್ನು ಉತ್ತೇಜಿಸಲು ಸರ್ಕಾರ ಕೆಲಸ ಮಾಡುತ್ತದೆ- ನಿರ್ಮಲಾ ಸೀತಾರಾಮನ್

ಸರ್ಕಾರ 5 ಇಂಟಿಗ್ರೇಟೆಡ್ ಆಕ್ವಾ ಪಾರ್ಕ್‌ಗಳನ್ನು ತೆರೆಯಲಿದೆ

ಸರ್ಕಾರ 5 ಇಂಟಿಗ್ರೇಟೆಡ್ ಆಕ್ವಾ ಪಾರ್ಕ್‌ಗಳನ್ನು ತೆರೆಯಲಿದೆ-ನಿರ್ಮಲಾ ಸೀತಾರಾಮನ್

ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್

ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು-ನಿರ್ಮಲಾ ಸೀತಾರಾಮನ್

ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು

ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು-ನಿರ್ಮಲಾ ಸೀತಾರಾಮನ್

ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗೆ ಮನೆ ನಿರ್ಮಾಣ

ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ: ನಿರ್ಮಲಾ

ನಮ್ಮ ಯುವಕರ ಬಗ್ಗೆ ದೇಶಕ್ಕೆ ಹೆಮ್ಮೆ ಇದೆ

ಕ್ರೀಡೆಯಲ್ಲಿ ಹೊಸ ಎತ್ತರಕ್ಕೆ ಏರುತ್ತಿರುವ ನಮ್ಮ ಯುವಕರ ಬಗ್ಗೆ ದೇಶಕ್ಕೆ ಹೆಮ್ಮೆ ಇದೆ. 2023 ರಲ್ಲಿ ಏಷ್ಯನ್ ಗೇಮ್ಸ್ ಮತ್ತು ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಅತ್ಯಧಿಕ ಪದಕಗಳ ಸಂಖ್ಯೆಯು ಹೆಚ್ಚಿನ ಆತ್ಮವಿಶ್ವಾಸವನ್ನು ತೋರಿಸುತ್ತದೆ.

 GDP ಮೇಲೆ ಸರ್ಕಾರದ ಗಮನ

ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ-ನಿರ್ಮಲಾ ಸೀತಾರಾಮನ್

ತ್ರಿವಳಿ ತಲಾಖ್​

ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರವಾಗಿಸುವುದು, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 70% ಕ್ಕಿಂತ ಹೆಚ್ಚು ಮನೆಗಳನ್ನು ನೀಡುವುದು ಅವರ ಘನತೆಯನ್ನು ಹೆಚ್ಚಿಸಿದೆ-ನಿರ್ಮಲಾ

ತೆರಿಗೆ ಸುಧಾರಣೆಗಳಿಂದ ತೆರಿಗೆ ವ್ಯಾಪ್ತಿ ಹೆಚ್ಚಿದೆ

ಎಲ್ಲಾ ಮೂಲಭೂತ ಯೋಜನೆಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುತ್ತಿವೆ, ತೆರಿಗೆ ಸುಧಾರಣೆಗಳಿಂದ ತೆರಿಗೆ ವ್ಯಾಪ್ತಿ ಹೆಚ್ಚಿದೆ-ನಿರ್ಮಲಾ ಸೀತಾರಾಮನ್

ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ 70 ಪ್ರತಿಶತ ಮನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ

ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ 70 ಪ್ರತಿಶತ ಮನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ: ನಿರ್ಮಲಾ

ಸರ್ಕಾರದ ಮುಂದೆ ಹಲವು ಸವಾಲುಗಳು

2014ರಲ್ಲಿ ಪ್ರಧಾನಿ ಮೋದಿ ಅಧಿಕಾರ ಸ್ವೀಕರಿಸಿದಾಗ ಹಲವು ಸವಾಲುಗಳಿದ್ದವು. ಸಾರ್ವಜನಿಕರ ಹಿತದೃಷ್ಟಿಯಿಂದ ಆರ್ಥಿಕತೆಯನ್ನು ಬಲಪಡಿಸಲು ಮತ್ತು ಜನರಿಗೆ ಉದ್ಯೋಗವನ್ನು ಪಡೆಯಲು ಅನೇಕ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಮಾಡಲಾಗಿದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯತ್ತ ಸರ್ಕಾರದ ಗಮನ ಕೇಂದ್ರೀಕರಿಸಿದೆ ಮತ್ತು ಎಲ್ಲಾ ವರ್ಗ ಮತ್ತು ಜನರ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಯುತ್ತಿದೆ. 2047 ರ ವೇಳೆಗೆ ನಾವು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ-ನಿರ್ಮಲಾ ಸೀತಾರಾಮನ್

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ-ನಿರ್ಮಲಾ

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ-ನಿರ್ಮಲಾ

ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಭಾಗವಹಿಸುವಿಕೆ 10 ವರ್ಷಗಳಲ್ಲಿ 28 ಪ್ರತಿಶತದಷ್ಟು ಹೆಚ್ಚಾಗಿದೆ: ನಿರ್ಮಲಾ

ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಭಾಗವಹಿಸುವಿಕೆ 10 ವರ್ಷಗಳಲ್ಲಿ 28 ಪ್ರತಿಶತದಷ್ಟು ಹೆಚ್ಚಾಗಿದೆ: ನಿರ್ಮಲಾ

ಫಸಲ್ ಬಿಮಾ ಯೋಜನೆಯಿಂದ ನಾಲ್ಕು ಕೋಟಿ ರೈತರಿಗೆ ಲಾಭ: ನಿರ್ಮಲಾ

ಫಸಲ್ ಬಿಮಾ ಯೋಜನೆಯಿಂದ ನಾಲ್ಕು ಕೋಟಿ ರೈತರಿಗೆ ಲಾಭ: ನಿರ್ಮಲಾ

ಬಡವರು, ಮಹಿಳೆಯರು ಹಾಗೂ ಯುವಕರ ಕಡೆಗೆ ಹೆಚ್ಚು ಗಮನ

ಬಡವರು, ಮಹಿಳೆಯರು ಮತ್ತು ಯುವಕರ ಕಡೆ ಗಮನ ಹರಿಸುವ ಅಗತ್ಯವಿದೆ ಎಂದು ಮಧ್ಯಂತರ ಬಜೆಟ್​ ಮಂಡನೆಯಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದರು.

ಜನಾದೇಶದ ಬಗ್ಗೆ ನಿರ್ಮಲಾ ಮಾತು

ನಮ್ಮ ಯುವ ದೇಶವು ಹೆಚ್ಚಿನ ಆಕಾಂಕ್ಷೆಗಳನ್ನು ಹೊಂದಿದೆ, ಅದರ ವರ್ತಮಾನದ ಬಗ್ಗೆ ಹೆಮ್ಮೆಯಿದೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಭರವಸೆ ಮತ್ತು ನಂಬಿಕೆಯನ್ನು ಹೊಂದಿದೆ. ನಮ್ಮ ಸರ್ಕಾರದ ಅತ್ಯುತ್ತಮ ಕೆಲಸದ ಆಧಾರದ ಮೇಲೆ ಜನರು ಮತ್ತೊಮ್ಮೆ ಬಲವಾದ ಜನಾದೇಶವನ್ನು ನೀಡುತ್ತಾರೆ ಎಂದು ನಾವು ಭಾವಿಸುತ್ತೇವೆ-ನಿರ್ಮಲಾ ಸೀತಾರಾಮನ್

ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ

ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ-ನಿರ್ಮಲಾ ಸೀತಾರಾಮನ್

ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ: ನಿರ್ಮಲಾ

ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ, ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೆ ವಿದ್ಯುತ್‌ಗೆ ಒತ್ತು ಕೊಡಲಾಗುತ್ತಿದೆ. ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಉತ್ತಮ ಸಾಧನೆ ಮಾಡಿದೆ-ನಿರ್ಮಲಾ ಸೀತಾರಾಮನ್

ಬಜೆಟ್‌ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮಧ್ಯಂತರ ಬಜೆಟ್ ಉತ್ತಮವಾಗಿರುತ್ತದೆ ಎಂದು  ಪ್ರಧಾನಿ ಮೋದಿ ಹೇಳಿದ್ದಾರೆ.