ಡಿವೈಎಸ್ಪಿ ಶಿವಾನಂದ ಕಟಗಿ ಅವರಿಗೆ ವರ್ಗಾವಣೆ

ದಾಂಡೇಲಿ : ಕಳೆದ ಒಂದು ವರ್ಷದಿಂದ ದಾಂಡೇಲಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದ ಶಿವಾನಂದ ಕಟಗಿ ಅವರನ್ನು ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆಗೊಳಿಸಲಾಗಿದೆ.

ಶಿಸ್ತು ಮತ್ತು ದಕ್ಷ ಪ್ರಾಮಾಣಿಕ ಅಧಿಕಾರಿಯಾಗಿ ಗಮನ ಸೆಳೆದಿರುವ ಶಿವಾನಂದ ಕಟಗಿಯವರನ್ನು ಬರಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಅತ್ಯುತ್ತಮ ಕಾರ್ಯನಿರ್ವಹಣೆಯಿಂದಾಗಿ ಇಲಾಖೆಯ ಮೇಲಾಧಿಕಾರಿಗಳ ಶ್ಲಾಘನೆಗೆ ಡಿವೈಎಸ್ಪಿ ಶಿವಾನಂದ ಕಟಗಿ ಅವರು ಪಾತ್ರರಾಗಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ನಗುಮೊಗದ ಸರಳ ಸಹೃದಯಿ ವ್ಯಕ್ತಿತ್ವದ ಪೊಲೀಸ್ ಅಧಿಕಾರಿಯಾಗಿರುವ ಶಿವಾನಂದ ಕಟಗಿಯವರು ಇಲಾಖೆಯ ಸಿಬ್ಬಂದಿಗಳ ಜೊತೆ ಅತ್ಯುತ್ತಮವಾದ ಬಾಂಧವ್ಯವನ್ನು ಇಟ್ಟುಕೊಂಡಿರುವುದು ಅವರ ಯೋಗ್ಯ ವ್ಯಕ್ತಿತ್ವವನ್ನು ಸಾದರ ಪಡಿಸುತ್ತದೆ.