ಸಿದ್ದಾಪುರ ತಾಲೂಕು ಆಡಳಿತದ ವತಿಯಿಂದ ಶಿವಶರಣ ಮಡಿವಾಳ ಮಾಚಿದೇವರ ಜಯಂತಿ ಆಚರಣೆ

ಸಿದ್ದಾಪುರ : ತಾಲೂಕು ಆಡಳಿತದ ವತಿಯಿಂದ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶಿವಶರಣ ಮಡಿವಾಳ ಮಾಚಿದೇವರ ಜಯಂತಿ ಆಚರಿಸಲಾಯಿತು.
ತಹಶೀಲ್ದಾರ್ ಎಮ್ ಆರ್ ಕುಲಕರಣಿ ಅವರು ಮಾಚಿದೇವರ ಭಾವ ಚಿತ್ರಕ್ಕೆ ದೀಪ ಬೆಳಗಿ ಪುಷ್ಪ ನಮನವನ್ನು ಸಲ್ಲಿಸಿ ಶುಭಾಶಯ ಕೋರಿದರು. ಈ
ಸಂದರ್ಭದಲ್ಲಿ ಹಾಜರಿದ್ದ ಸಮಾಜದ ಮುಖಂಡರು ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನವನ್ನ ಸಾಧಿಸಿದರು. ಅಸಮಾನತೆ ಅಸ್ಪೃಶ್ಯತೆ ಹಾಗೂ ಸಮಾಜದಲ್ಲಿನ ಕಲ್ಮಶವನ್ನು ಸ್ವಚ್ಛಗೊಳಿಸಲು ಹೋರಾಡಿದ ಬಗ್ಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.