ಎಲ್.ಕೆ ಅಡ್ವಾಣಿಗೆ ಭಾರತ ರತ್ನ, ರೂಪಾಲಿ ಎಸ್. ನಾಯ್ಕ ಹರ್ಷ

ಕಾರವಾರ : ದೇಶದ ಹಿರಿಯ ರಾಜಕಾರಣಿ, ಬಿಜೆಪಿಯ ಭೀಷ್ಮ ಎಂದೇ ಗುರುತಿಸಲ್ಪಡುವ ಮಾಜಿ ಉಪ ಪ್ರಧಾನಿ ಲಾಲಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದು ಸಂತಸ ಉಂಟುಮಾಡಿದೆ. ಈ ದೇಶಕ್ಕೆ ಅವರು ನೀಡಿದ ಕೊಡುಗೆಗೆ ಸೂಕ್ತ ಗೌರವ ನೀಡಿದಂತಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ ಸಂತಸ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಆಡ್ವಾಣಿ ಅವರು ಮುನ್ನುಡಿ ಬರೆದು ದೇಶಾದ್ಯಂತ ಹೋರಾಟ ನಡೆಸಿದ್ದರು. ಅವರ ರಾಷ್ಟ್ರೀಯವಾದ ಹಾಗೂ ದೇಶಕ್ಕಾಗಿ  ಅಸಾಧಾರಣ ಕೊಡುಗೆ ನೀಡಿದ್ದಾರೆ. ಅವರು ಸಲ್ಲಿಸಿದ ದೇಶಸೇವೆಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿರುವುದು ಅತ್ಯಂತ ಪ್ರಶಸ್ತವಾಗಿದೆ. ಲಾಲಕೃಷ್ಣ ಅಡ್ವಾಣಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಹಾಗೂ ಪ್ರಶಸ್ತಿ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನೂ ಅಭಿನಂದಿಸುತ್ತೇನೆ ಎಂದು ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ