ಹಿರಿಯ ಸಾಹಿತಿ ವಿಷ್ಣು ನಾಯ್ಕ ನಿಧನಕ್ಕೆ ರೂಪಾಲಿ ನಾಯ್ಕ ಸಂತಾಪ  

ಕಾರವಾರ : ಹಿರಿಯ ಸಾಹಿತಿ, ಪ್ರಕಾಶಕ, ಚಿಂತಕ, ಸಂಘಟಕರಾದ ವಿಷ್ಣು ನಾಯ್ಕ ಅಂಕೋಲಾ ನಿಧನರಾಗಿದ್ದು ತೀವ್ರ ಆಘಾತವನ್ನು ಉಂಟುಮಾಡಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ ಕಂಬನಿ ಮಿಡಿದಿದ್ದಾರೆ…

ತಮ್ಮ ಸಾಹಿತ್ಯ, ಸಂಘಟನೆಯಿಂದ ನಾಡಿನಾದ್ಯಂತ ಪ್ರಸಿದ್ಧರಾದ ಅವರು ನಮ್ಮ ಕ್ಷೇತ್ರ, ನಾಡಿನ ಹೆಮ್ಮೆಯಾಗಿದ್ದರು. ಉದಯೋನ್ಮುಖ ಕವಿ, ಸಾಹಿತಿಗಳನ್ನು ಬೆನ್ನುತಟ್ಟಿ ಹುರಿದುಂಬಿಸುವ ಮೂಲಕ ಅಂಕೋಲೆಯಲ್ಲಿ ಸಾಹಿತ್ಯಿಕ ಚಟುವಟಿಕೆ ನಿರಂತರವಾಗಿರುವಂತೆ ನೋಡಿಕೊಂಡಿದ್ದರು. ಅವರನ್ನು ಕಳೆದುಕೊಂಡಿರುವುದರಿಂದ ಜಿಲ್ಲೆಯ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ದೇವರು ಸದ್ಗತಿ ನೀಡಲಿ. ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ರೂಪಾಲಿ ಎಸ್. ನಾಯ್ಕ ತಿಳಿಸಿದ್ದಾರೆ..