ಸರ್ವಜ್ಞ ಜಯಂತಿ ಆಚರಣೆ

ಕಾರವಾರ:- ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ , ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಶ್ರೀ ಸಂತ ಕವಿ ಸರ್ವಜ್ಞ ಜಯಂತಿಯನ್ನು ಭೂ ದಾಖಲೆ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಪೂಜಾರಿ ಉದ್ಘಾಟಿಸಿದರು.

ಡಾ.ಗಣೇಶ್ ಬಿಷ್ಟಣ್ಣ ನವರ ಅವರು ಶ್ರೀ ಸಂತ ಕವಿ ಸರ್ವಜ್ಞ ಅವರ ಜೀವನ ಮತ್ತು ತ್ರಿಪದಿಗಳ ಬಗ್ಗೆ ಉಪನ್ಯಾಸ ನೀಡಿದರು.

                ಸರ್ವಜ್ಞ ಕವಿಯ ಸಮುದಾಯದ ಬಾಂಧವರು ಮತ್ತಿತರರು ಉಪಸ್ಥಿತರಿದ್ದರು.