ಮುರುಡೇಶ್ವರದಲ್ಲಿ ಸಾವನ್ನಪ್ಪಿದ ಭಾರತ ಪ್ರವಾಸಕ್ಕೆ ಬಂದಿದ್ದ ರಷ್ಯಾ ಪ್ರಜೆ

ಭಟ್ಕಳ : ಭಾರತ ಪ್ರವಾಸಕ್ಕೆಂದು ಬಂದಿದ್ದ ರಷ್ಯಾದ ಪ್ರಜೆಯೊಬ್ಬರು ಭಟ್ಕಳ ತಾಲೂಕಿನ ಮುರ್ಡೇಶ್ವರದ ಕಡಲ ತೀರದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ…

ರಷ್ಯಾ ದೇಶದ ತಲಿಯತ್ತಿ ಸಿಟಿಯ ಯರೋಸ್ಲೇವಸ್ಕರ್ ಅಲೇಕ್ಷಾಂಡರ್ ತನೆಗಾ( 71) ಮೃತ ಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ರಷ್ಯಾ ದೇಶದಿಂದ ಗೆಳೆಯರೊಂದಿಗೆ ಗೋವಾಕ್ಕೆ ಬಂದಿಳಿದಿದ್ದರು. ಗೋವಾದ ಪ್ರವಾಸಿ ತಾಣಗಳನ್ನು ಸುತ್ತಾಡಿ ಗುರುವಾರ ಮುರ್ಡೇಶ್ವರಕ್ಕೆ ಬಂದಿದ್ದರು.

ಮುರುಡೇಶ್ವರದ ದೇವಸ್ಥಾನದ ಬಳಿಯಲ್ಲಿ ತೆರಳುವಾಗ ಯರೋಸ್ಲೇವಸ್ಕರ್ ಹಠಾತನೆ ಕುಸಿದು ಬಿದ್ದಿದ್ದಾರೆ. ತಕ್ಷಣ 5 ನಿಮಿಷ ಪ್ರಾಥಮಿಕ ಚಿಕಿತ್ಸೆ ನೀಡದ ಬಳಿಕ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡಿದರು ಕುಸಿದು ಬಿದ್ದ ವ್ಯಕ್ತಿ ಚೇತರಿಸಿಕೊಳ್ಳದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ಕುರಿತು ಅವರ ಸಂಬಂಧಿ ಎಲೆನಾ ಬೆಲೊಗ್ ಲಜೇವಾ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…