ಸಮಸ್ಯೆ ಹೇಳಿಕೊಂಡ ಗ್ರಾಪಂ ಸದಸ್ಯರು: ಪರಿಹರಿಸುವ ಭರವಸೆ ನೀಡಿದ ವಿ.ಪ ಸದಸ್ಯ

ಕಾರವಾರ: ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಸೋಮವಾರ ಅಮದಳ್ಳಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಕೆಲವು ಸದಸ್ಯರ ಜೊತೆಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸದಸ್ಯರು ಪಂಚಾಯತಿಯಲ್ಲಿ ಉಂಟಾಗುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ಹೆಚ್ಚಿನ ಅನುದಾನವನ್ನು ಗ್ರಾಮ ಪಂಚಾಯತ ಮಟ್ಟದಲ್ಲಿ ನೀಡುವಂತೆ ಮನವಿ ಮಾಡಿಕೊಂಡರು.

ಈ ಬಗ್ಗೆ ಪ್ರತಿಕ್ರಿಯಿಸಿದ ಗಣಪತಿ ಉಳ್ವೇಕರ್ ನಿಮ್ಮ ಸಮಸ್ಯೆಗಳನ್ನು ಆಲಿಸಿದ್ದು ಅವುಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗಣಪತಿ ಉಳ್ವೇಕರ್ ಅವರನ್ನು ಸದಸ್ಯರು ಸನ್ಮಾನಿಸಿ ಗೌರವಿಸಿದರು. ಈ ವೇಳೆ ನಗರಸಭೆ ಅಧ್ಯಕ್ಷ ಡಾ. ನಿತೀನ್ ಪಿಕಳೆ, ಗ್ರಾಮ ಪಂಚಾಯತ ಅಧ್ಯಕ್ಷೆ ಆಶಾ ನಾಯ್ಕ, ಉಪಾಧ್ಯಕ್ಷ ರವಿ ದುರ್ಗೇಕರ್, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗೇಂದ್ರ ನಾಯ್ಕ ಹಾಗೂ ಗ್ರಾಮ ಪಂಚಾಯತ ಹಾಲಿ ಹಾಗೂ ಮಾಜಿ ಸದಸ್ಯರು ಇದ್ದರು.