ಸಂವಿಧಾನ ಬದಲಾವಣೆ ಹೇಳಿಕೆ: ಮುಜುಗರ ತಾಳಲಾರದೇ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಅನಂತಕುಮಾರ್ ಹೆಗಡೆ

Ananth Kumar Hegde Constitution Remark: ಸಂಸದ ಅನಂತ ಕುಮಾರ ಹೆಗಡೆ ಮತ್ತೆ ಸಂವಿಧಾನ ಬದಲಾವಣೆಯ ಮಾತನ್ನ ಆಡಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಕ್ಕೂ ಹೆಚ್ಚು ಸೀಟು ಗೆಲ್ಲಬೇಕು, ರಾಜ್ಯಸಭೆಯಲ್ಲೂ ನಮಗೆ ಬಹುಮತ ಸಿಕ್ರೆ. ಸಂವಿಧಾನ ತಿದ್ದುಪಡಿ ಮಾಡಲಾಗುತ್ತೆ, ಆಗ ಇದೆ ನೋಡಿ ನಿಜವಾದ ಮಾರಿ ಹಬ್ಬ ಎಂದು ಹೇಳಿದ್ದಾರೆ. ಇದೀಗ ಹೆಗಡೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ, ಹೆಗಡೆ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ಇನ್ನು ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದಕ್ಕೆ ಅನಂತ ಕುಮಾರ್ ಹೆಗಡೆ ನಾಲಿಗೆ ಹರಿಬಿಟ್ಟಿದ್ದಾರೆ.

ಅಂಕೋಲಾ (ಮಾರ್ಚ್ 11 : ಸಂಸದ ಅನಂತ ಕುಮಾರ ಹೆಗಡೆ (Ananth Kumar Hegde ) ಮತ್ತೆ ಸಂವಿಧಾನ ಬದಲಾವಣೆಯ(Change Constitution Remark) ಮಾತನ್ನ ಆಡಿದ್ದು, ಇದಕ್ಕೆ ಇದೀಗ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಅವರ ಹೇಳಿಕೆ ಪಕ್ಷಕ್ಕೆ ಸಂಬಂಧವಿಲ್ಲ ಎಂದು ರಾಜ್ಯ ಬಿಜೆಪಿ ಸ್ಪಷ್ಟಪಡಿಸಿದೆ. ಈ ಮುಜುಗರ ತಾಳಲಾರದೇ ಅನುಂತಕುಮಾರ್ ಹೆಗಡೆ ಮಾಧ್ಯಮಗಳ ವಿರುದ್ಧ ಆಕ್ರೋಶಗೊಂಡು ನಾಲಿಗೆ ಹರಿಬಿಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೊಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಹೆಗಡೆ, ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನೂ ಬೆಕಾದ್ರೂ ಬರೆದುಕೊಳ್ಳಲಿ. ಬೇಕಾದ ಬೇವರ್ಸಿಗಳು ಏನೂ ಬೇಕಾದ್ರೂ ಒದರಾಡಲಿ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನ್ ಬೇಕಾದ್ರೂ ಬರೆದುಕೊಳ್ಳಲಿ. ಬೇಕಾದ ಬೇವರ್ಸಿಗಳು ಏನ್ ಬೇಕಾದ್ರೂ ಒದರಾಡಲಿ. ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದ ಚರ್ಚೆ ಆಗಲಿ. ಆದ್ರೆ ನೀವೆಲ್ಲ ಇದಕ್ಕೆ ವಿಚಲಿತರಾಗಬಾರದು. ನೀವು ಯಾವದೋ ಸಾಮಾನ್ಯ ಪಕ್ಷದ ಕಾೃಯರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಬೇರೆ ಯಾರೋ ಪತ್ರಿಕೆಯಲ್ಲಿ, ವಾಟ್ಸಪ್‌ನಲ್ಲಿ ಎನೆನೋ ಹೇಳಿದ್ರು ಎಂದು ವಿಚಲಿತರಾಗಬಾರದು ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.

ಆನೆ ನಡೆದಿದ್ದೆ ದಾರಿ ಎಂಬಂತೆ ನಾವು ನಡಿಯಬೇಕು ಕಣ್ರಿ. ಆನೆ ನಡೆಯುತ್ತಿದ್ದರೆ ನಾಯಿಗಳು ಬೋಗಳುತ್ತಾ ಇರುತ್ತವೆ. ಆನೆ ನಡೆಯುತ್ತಿದ್ದರೆ ಯಾವಗಲಾದರೂ ನಾಯಿ ಕಡೆ ಗಮನ ಕೊಡುತ್ತಾ? ನಾಯಿಗಳಿಗೂ ಗೊತ್ತು ನಾವು ಎಷ್ಟೆ ಬೊಗಳಿದ್ರು ಆನೆಗೆ ಏನು ಮಾಡುವುದಕ್ಕೂ ಆಗಲ್ಲ. ನಾಯಿಗಳು ಬೋಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ ಎಂದು ವಾಗ್ದಾಳಿ ನಡೆಸಿದರು.

ಹಿಂದೊಮ್ಮೆ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾತನಾಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಅಲ್ಲದೇ ಸಚಿವ ಸ್ಥಾನವನ್ನೂ ಸಹ ಕಳೆದುಕೊಂಡಿದ್ದರು. ಇದೀಗ ಮತ್ತೆ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿಗೆ ಮುಜುಗರ ಉಂಟು ಮಾಡಿದೆ. ಅಲ್ಲದೇ ಕಾಂಗ್ರೆಸ್‌ಗೆ​ ಪ್ರಬಲ ಅಸ್ತ್ರವನ್ನು ನೀಡಿದ್ದು, ಇದನ್ನೇ ಉಲ್ಲೇಖಿಸಿ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಶಾಸಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ..

ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ, ಅನಂತಕುಮಾರ್ ಅವರು ಸಂವಿಧಾನ ಬದಲಾವಣೆ ಹೇಳಿಕೆ ಪಕ್ಷಕ್ಕೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಬಿಜೆಪಿ ನಾಯಕರು ಅನಂತಕುಮಾರ್ ಹೆಗಡೆ ವಿರುದ್ಧ ಕಿಡಿ ಕಾರಿದ್ದಾರೆ. ಇದರ ಮುಜುಗರ ತಾಳಲಾರದೇ ಹೆಗಡೆ ಮಾಧ್ಯಮಗಳ ವಿರುದ್ಧ ಆಕ್ರೋಶಗೊಂಡಿದ್ದು, ಮಾಧ್ಯಮಗಳ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ…