ಮಾ. 16ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ, 18ರಂದು ಶಿವಮೊಗ್ಗದಲ್ಲಿ ಸಮಾವೇಶ: ಶಾಸಕ ವಿ ಸುನೀಲ್ ಕುಮಾರ್

ಮಾ.16 ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಮಾರ್ಚ್ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಸಮಾವೇಶದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಇಂದು ರಾತ್ರಿ ಅಥವಾ ನಾಳೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಆಗುತ್ತೆ ಎಂದು ಹೇಳಿದ್ದಾರೆ.

ಬೆಂಗಳೂರು, ಮಾರ್ಚ್​​ 13: ರಾಜ್ಯ ರಾಜಕಾರಣದಲ್ಲಿ ಇದೀಗ ಲೋಕಸಭಾ ಚುನಾವಣೆಯ ಕೆಲಸಗಳು ಆರಂಭಗೊಂಡಿವೆ. ಪ್ರತಿಯೊಂದು ಪಕ್ಷಗಳು ಚುನಾವಣಾ ಗೆಲುವಿಗೆ ಸಾಕಷ್ಟು ಕಸರತ್ತು ನಡೆಸಿವೆ. ಈ ಮಧ್ಯೆ ಮಾ.16 ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿದ್ದಾರೆ. ಮಾರ್ಚ್ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಸಮಾವೇಶದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ (V Sunil Kumar) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ಸಭೆಗೆ 2 ಲಕ್ಷಕ್ಕಿಂತ ಹೆಚ್ಚು ಜನ ಸೇರಿಸಲು ಸಿದ್ಧತೆ ಮಾಡುತ್ತಿದ್ದೇವೆ. ಎಲ್ಲಾ ಕ್ಷೇತ್ರಗಳಲ್ಲೂ ರಾಷ್ಟ್ರೀಯ ನಾಯಕರು ಪ್ರವಾಸ ಮಾಡಲಿದ್ದಾರೆ ಎಂದಿದ್ದಾರೆ.

ಶೀಘ್ರವೇ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ
ಇಂದು ರಾತ್ರಿ ಅಥವಾ ನಾಳೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಆಗುತ್ತೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು 8 ಕ್ಲಸ್ಟರ್ ಆಗಿ​ ಮಾಡಲಾಗಿದ್ದು, 8 ಕ್ಲಸ್ಟರ್​ಗಳಿಗೆ ರಾಷ್ಟ್ರೀಯ ನಾಯಕರ ಪ್ರವಾಸ ಮುಕ್ತಾಯವಾಗಿದೆ ಎಂದು ತಿಳಿಸಿದರು.

ಬಿಜೆಪಿ ಟಿಕೆಟ್ ಅನೌನ್ಸ್ ಆಗೋದಕ್ಕೆ ಕೌಂಟ್​ಡೌನ್ ಸ್ಟಾರ್ಟ್ ಆಗಿದೆ. ಯಾವುದೇ ಕ್ಷಣದಲ್ಲಾದ್ರೂ ಟಿಕೆಟ್ ಘೋಷಣೆ ಆಗಲಿದೆ. ಅದ್ರಲ್ಲೂ, ಕರ್ನಾಟಕದ ಅಭ್ಯರ್ಥಿಗಳ ಹೆಸರು ಘೋಷಣೆ ಆಗಲಿದ್ದು, ಇಡೀ ರಾಜ್ಯ ಬಿಜೆಪಿ ಚಿತ್ತ ಈಗ ದೆಹಲಿಯತ್ತ ನೆಟ್ಟಿದೆ. ಮೂಲಗಳ ಪ್ರಕಾರ ಕರ್ನಾಟಕದ 15 ರಿಂದ 18 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಫೈನಲ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಡಿ.ವಿ.ಸದಾನಂದ ಗೌಡಗೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಈ ಬಾರಿ ಅಭ್ಯರ್ಥಿ ಬದಲಾವಣೆ ಮಾಡುವ ಬಗ್ಗೆ ಡಿವಿಎಸ್​ಗೆ ಹೈಕಮಾಂಡ್ ದೂರವಾಣಿ ‌ಮೂಲಕ ಮಾಹಿತಿ ರವಾನೆ ಮಾಡಿದೆ.

ಕೆ.ಎಸ್​.ಈಶ್ವರಪ್ಪ ಪುತ್ರ ಕಾಂತೇಶ್​ಗೆ ಲೋಕಸಭೆ ಟಿಕೆಟ್ ಕೈ ತಪ್ಪೋ ಆತಂಕದಲ್ಲಿ ವರಿಷ್ಠರ ವಿರುದ್ಧ ಅಸಮಾಧಾನಗೊಂಡಂತಿದೆ. ಹೀಗಾಗಿ ಆಪ್ತರು, ಬೆಂಬಲಿಗರ ಜೊತೆ ಶಿವಮೊಗ್ಗದಲ್ಲಿ ಶುಕ್ರವಾರ ಸಂಜೆ ಸಭೆ ಕರೆದಿದ್ದಾರೆ. ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿಲುವು ಪ್ರಕಟಿಸಲಿದ್ದಾರೆ.