ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟ, ಕರ್ನಾಟಕದ ಹಲವು ಹಾಲಿ ಸಂಸದರಿಗೆ ಟಿಕೆಟ್ ಕಟ್

BJP releases 2nd list: ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಅದರಲ್ಲಿ ಕರ್ನಾಟಕದ ಪೈಕಿ ಮೊದಲ ಪಟ್ಟಿ ಪ್ರಕಟವಾಗಿದ್ದು, ಕೆಲ ಹಾಲಿ ಸಂಸದರಿಗೆ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ.

ನವದೆಹಲಿ, ಮಾರ್ಚ್ 13 : ಲೋಕಸಭಾ ಚುನಾವಣೆಗೆ(Lok Sabha Elections 2024) ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಅದರಲ್ಲೂ ಮುಖ್ಯವಾಗಿ ಹಲವು ಹಾಲಿ ಸಂಸದರಿಗೆ ಟಿಕೆಟ್​ ಮಿಸ್ ಆಗಿದ್ದು, ಹೊಸ ಮುಖಗಳಿಗೆ ಮಣೆ ಹಾಕಿದೆ.

ಯಾರ್ಯಾರಿಗೆ ಟಿಕೆಟ್?
ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ ಲೋಕಸಭಾ ಕ್ಷೇತ್ರ-ಪಿ.ಸಿ.ಗದ್ದಿಗೌಡರ್
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ-ಕೋಟ ಶ್ರೀನಿವಾಸ ಪೂಜಾರಿ
ಹಾವೇರಿ ಲೋಕಸಭಾ ಕ್ಷೇತ್ರ-ಬಸವರಾಜ ಬೊಮ್ಮಾಯಿ
ಮೈಸೂರು ಕ್ಷೇತ್ರ-ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಡಾ.ಸಿ.ಎನ್.ಮಂಜುನಾಥ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಶೋಭಾ ಕರಂದ್ಲಾಜೆ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ತೇಜಸ್ವಿ ಸೂರ್ಯ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ-ಪಿ.ಸಿ.ಮೋಹನ್
ತುಮಕೂರು ಲೋಕಸಭಾ ಕ್ಷೇತ್ರ-ವಿ.ಸೋಮಣ್ಣ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಕ್ಯಾಪ್ಟನ್ ಬ್ರಿಜೇಶ್ ಚೌಟಾ
ಚಾಮರಾಜನಗರ ಲೋಕಸಭಾ ಕ್ಷೇತ್ರ-ಎಸ್.ಬಾಲರಾಜು
ಧಾರವಾಡ ಲೋಕಸಭಾ ಕ್ಷೇತ್ರ-ಪ್ರಹ್ಲಾದ್ ಜೋಶಿ
ಕೊಪ್ಪಳ ಲೋಕಸಭಾ ಕ್ಷೇತ್ರ-ಡಾ.ಬಸವರಾಜ ತ್ಯಾವಟೂರು
ದಾವಣಗೆರೆ ಲೋಕಸಭಾ ಕ್ಷೇತ್ರ-ಗಾಯತ್ರಿ ಸಿದ್ದೇಶ್ವರ್
ಬಳ್ಳಾರಿ ಲೋಕಸಭಾ ಕ್ಷೇತ್ರ-ಬಿ.ಶ್ರೀರಾಮುಲು
ಕಲಬುರಗಿ ಲೋಕಸಭಾ ಕ್ಷೇತ್ರ-ಡಾ.ಉಮೇಶ್ ಜಾಧವ್
ಬೀದರ್ ಲೋಕಸಭಾ ಕ್ಷೇತ್ರ-ಭಗವಂತ ಖೂಬಾ
ವಿಜಯಪುರ ಲೋಕಸಭಾ ಕ್ಷೇತ್ರ-ರಮೇಶ್ ಜಿಗಜಿಣಗಿ
ಶಿವಮೊಗ್ಗ ಲೋಕಸಭಾ ಕ್ಷೇತ್ರ-ಬಿ.ವೈ.ರಾಘವೇಂದ್ರ

ಯಾರ ಬದಲಿಗೆ ಯಾರಿಗೆ ಟಿಕೆಟ್​?

  • ದಕ್ಷಿಣ ಕನ್ನಡ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲು ಬದಲಿಗೆ ಬ್ರಿಜೇಶ್​ ಚೌಟಾಗೆ ಟಿಕೆಟ್
  • ಮೈಸೂರು- ಪ್ರತಾಪ್​ ಸಿಂಹ ಬದಲು ಯದುವೀರ ಒಡೆಯರ್​ಗೆ ಟಿಕೆಟ್
  • ಬಳ್ಳಾರಿಯಲ್ಲಿ ದೇವೇಂದ್ರಪ್ಪ ಬದಲು ಶ್ರೀರಾಮುಲುಗೆ ಟಿಕೆಟ್
  • ಹಾವೇರಿಯಲ್ಲಿ ಶಿವಕುಮಾರ್ ಬದಲು ಬೊಮ್ಮಾಯಿಗೆ ಟಿಕೆಟ್
  • ತುಮಕೂರಿನಲ್ಲಿ G.S​.ಬಸವರಾಜು ಬದಲು ಸೋಮಣ್ಣ ಕಣಕ್ಕೆ
  • ಕೊಪ್ಪಳದಲ್ಲಿ ಸಂಗಣ್ಣ ಕರಡಿ ಬದಲು ಡಾ.ಬಸವರಾಜ​ ಕ್ಯಾವಟರ್
  • ಹಾಲಿ ಸಂಸದ ಸದಾನಂದಗೌಡರಿಗೆ ಕೈತಪ್ಪಿದ ಬಿಜೆಪಿ ಟಿಕೆಟ್
  • ಬೆಂಗಳೂರು ಉತ್ತರ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಕಣಕ್ಕೆ
  •  ಚಾಮರಾಜನಗರದಿಂದ ವಿ.ಶ್ರೀನಿವಾಸ​ ಪ್ರಸಾದ್​ ಬದಲಿಗೆ ಎಸ್​.ಬಾಲರಾಜುಗೆ ಟಿಕೆಟ್

ಲೋಕಸಭಾ ಚುನಾವಣೆಗೆ ಹೊಸಮುಖಗಳು

  • ಡಾ. ಸಿ.ಎನ್. ಮಂಜುನಾಥ್-ಬೆಂಗಳೂರು ಗ್ರಾಮಾಂತರ
  • ಯದುವೀರ ಕೃಷ್ಣದತ್ತ ಒಡೆಯರ್-ಮೈಸೂರು-ಕೊಡಗು
  • ಕ್ಯಾ. ಬ್ರಿಜೇಶ್ ಚೌಟ-ದಕ್ಷಿಣ ಕನ್ನಡ
  • ಕೋಟ ಶ್ರೀನಿವಾಸ ಪೂಜಾರಿ-ಉಡುಪಿ-ಚಿಕ್ಕಮಗಳೂರು
  • ಗಾಯತ್ರಿ ಸಿದ್ದೇಶ್ವರ-ದಾವಣಗೆರೆ
  • ಡಾ. ಬಸವರಾಜ ಕ್ಯಾವತ್ತೂರ್-ಕೊಪ್ಪಳ

ಜೆಡಿಎಸ್​ಗೆ ಬಿಟ್ಟುಕೊಟ್ಟ ಮೂರು ಕ್ಷೇತ್ರಗಳು

  • ಮಂಡ್ಯ
  • ಹಾಸನ
  • ಕೋಲಾರ

ಐದು ಕ್ಷೇತ್ರಗಳ ಟಿಕೆಟ್ ಕಾಯ್ದಿರಿಸಿದ ಬಿಜೆಪಿ

ಒಟ್ಟು 28 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ 25 ಕ್ಷೇತ್ರಗಳ ಪೈಕಿ ಈಗ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ರಾಯಚೂರು, ಚಿತ್ರದುರ್ಗ, ಬೆಳಗಾವಿ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ ಕ್ಷೇತ್ರಗಳ ಟಿಕೆಟ್ ಕಾಯ್ದಿರಿಸಿದೆ.